BREAKING NEWS

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹಮಾಸ್‌ ವಾಯುಪಡೆ ಮುಖ್ಯಸ್ಥ ಮುರಾದ್ ಅಬು ಹತ್ಯೆ!

ಟೆಲ್ ಅವಿವ್ (ಇಸ್ರೇಲ್): ಇಸ್ರೇಲ್ ಹಾಗೂ ಪ್ಯಾಲೆಸ್ಟೀನ್​ ನಡುವೆ ಸಂಘರ್ಷ ತೀವ್ರಗೊಂಡಿದ್ದು, ರಾತ್ರಿಯಿಡೀ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ ಸಂಘಟನೆಯ ವಾಯುಪಡೆಯ ಮುಖ್ಯಸ್ಥ ಅಬು ಮುರಾದ್‌ ಹತ್ಯೆಯಾಗಿರುವುದಾಗಿ ತಿಳಿದುಬಂದಿದೆ.

ಶನಿವಾರ ನಡೆದ ಹತ್ಯಾಕಾಂಡದ ಸಮಯದಲ್ಲಿ ಭಯೋತ್ಪಾದಕರಿಗೆ ನಿರ್ದೇಶನ ನೀಡುವಲ್ಲಿ ಅಬು ಮುರಾದ್‌ ಹೆಚ್ಚು ಹೊಣೆಗಾರನಾಗಿದ್ದ. ಕಳೆದ ರಾತ್ರಿ ಇಸ್ರೇಲ್​ ವಾಯುಪಡೆಯ ಫೈಟರ್ ಜೆಟ್‌ಗಳು ಗಾಜಾ ಪಟ್ಟಿಯಾದ್ಯಂತ ವ್ಯಾಪಕವಾದ ದಾಳಿಗಳನ್ನು ನಡೆಸಿದ್ದು, ಈ ದಾಳಿಯಲ್ಲಿ ಅಬು ಮುರಾದ್‌ ಹತ್ಯೆಯಾಗಿದ್ದಾನೆಂದು ಇಸ್ರೇಲ್ ಹೇಳಿದೆ.

ಈ ಕುರಿತು ಇಸ್ರೇಲ್ ವಾಯುಪಡೆ ಸಾಮಾಜಿಕ ಜಾಲತಾಣ ‘ಎಕ್ಸ್​’ನಲ್ಲಿ ಪೋಸ್ಟ್ ಮಾಡಿದೆ. ಹಮಾಸ್‌ ಭಯೋತ್ಪಾದನಾ ತಾಣಗಳು ಮತ್ತು ಗಾಜಾ ಪಟ್ಟಿಯಲ್ಲಿರುವ ನುಖ್ಬಾ ಭಯೋತ್ಪಾದಕ ಕಾರ್ಯಕರ್ತರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ ಅಬು ಮುರಾದ್ ಹತ್ಯೆಯಾಗಿದ್ದಾನೆಂದು ಹೇಳಿದ್ದಾರೆ.

ವಾಯುಪಡೆಯ ಫೈಟರ್ ಜೆಟ್‌ಗಳು ಭಯೋತ್ಪಾದಕ ಸಂಘಟನೆ ಹಮಾಸ್‌ನ ಕಾರ್ಯಾಚರಣೆಯ ಪ್ರಧಾನ ಕಚೇರಿಯ ಮೇಲೆ ದಾಳಿ ಮಾಡಿದವು. ಅಲ್ಲಿಂದಲೇ ಈ ಸಂಘಟನೆಯು ತನ್ನ ವೈಮಾನಿಕ ಚಟುವಟಿಕೆಗಳನ್ನು ನಿರ್ವಹಿಸುತ್ತಿತ್ತು. ಈ ದಾಳಿಯ ಸಮಯದಲ್ಲಿ ಗಾಜಾ ನಗರದ ವಾಯು ಪಡೆಯ ಮುಖ್ಯಸ್ಥ ಮುರಾದ್ ಅಬು ಮುರಾದ್ ಕೊಲೆಯಾಗಿದ್ದಾರೆ. ಈತ ಶನಿವಾರ ನಡೆದ ಹತ್ಯಾಕಾಂಡದ ದಾಳಿಯಲ್ಲಿ ಭಯೋತ್ಪಾದಕರಿಗೆ ನಿರ್ದೇಶಿಸಿದ್ದ ಎಂದು ತಿಳಿಸಿದೆ.

ಇಷ್ಟೇ ಅಲ್ಲ, ”ಸ್ವಲ್ಪ ಸಮಯದ ಹಿಂದೆ ಇಸ್ರೇಲ್​ ರಕ್ಷಣಾ ಪಡೆಯ ಸೈನಿಕರು ಲೆಬನಾನ್‌ನಿಂದ ಇಸ್ರೇಲಿ ಭೂಪ್ರದೇಶಕ್ಕೆ ನುಸುಳಲು ಯತ್ನಿಸಿದ ಭಯೋತ್ಪಾದಕ ಕೋಶ ಗುರುತಿಸಿದ್ದಾರೆ. ವಾಯುಪಡೆಯು ಮಾನವರಹಿತ ವೈಮಾನಿಕ ವಾಹನದ ಮೂಲಕ ಈ ಭಯೋತ್ಪಾದಕ ಕೋಶವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ, ಹಲವಾರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಮಾಹಿತಿ ನೀಡಿದೆ.

ಮತ್ತೊಂದೆಡೆ, ರಾತ್ರಿಯಿಡೀ ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ಇಸ್ರೇಲ್​ ವಾಯುಪಡೆಗಳು ಹಮಾಸ್‌ನ ಕಮಾಂಡೋ ಪಡೆಗಳಿಗೆ ಸೇರಿದ ಡಜನ್‌ಗಟ್ಟಲೆ ಸ್ಥಳಗಳನ್ನು ನಾಶ ಮಾಡಿದೆ. ಈ ಪ್ರದೇಶಗಳು ಅಕ್ಟೋಬರ್ 7ರಂದು ಇಸ್ರೇಲ್‌ಗೆ ಒಳನುಸುಳುವಿಕೆಗೆ ಕಾರಣವಾಗಿದ್ದವು ಎಂದು ವರದಿಗಳು ತಿಳಿಸಿವೆ.

ಇಸ್ರೇಲ್ ಹಾಗೂ ಹಮಾಸ್ ಸಂಘರ್ಷದ ಮಧ್ಯೆ ಇಸ್ರೇಲ್​ ಸೇನೆಯು ಗಾಜಾ ನಗರದಿಂದ ಎಲ್ಲ ನಾಗರಿಕರಿಗೆ ಸ್ಥಳಾಂತರವಾಗುವಂತೆ ಕರೆ ನೀಡಿತ್ತು. ಇದರ ಬೆನ್ನಲ್ಲೇ ಗಾಜಾ ಪಟ್ಟಿಯಲ್ಲಿರುವ ಜನರು ವಲಸೆ ಹೋಗುತ್ತಿದ್ದಾರೆ ಎಂದು ಇಸ್ರೇಲ್​ ರಕ್ಷಣಾ ಪಡೆಗಳ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಜೊನಾಥನ್ ಕಾನ್ರಿಕಸ್ ಹೇಳಿದ್ದರು.

ನಾವು ದಕ್ಷಿಣದ ಕಡೆಗೆ ಪ್ಯಾಲೇಸ್ಟಿನಿಯನ್ ನಾಗರಿಕರ ಗಮನಾರ್ಹ ವಲಸೆಯನ್ನು ಗಮನಿಸುತ್ತಿದ್ದೇವೆ. ನಮ್ಮ ಎಚ್ಚರಿಕೆಯನ್ನು ಜನರು ಆಲಿಸಿ ಅರ್ಥಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಅಪಾಯಕಾರಿ ಪ್ರದೇಶದಿಂದ ಹೊರಬರುತ್ತಿದ್ದಾರೆ ಎಂದು ಕಾನ್ರಿಕಸ್ ತಿಳಿಸಿದ್ದರು.

andolanait

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

2 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

3 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

3 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

3 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

4 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

4 hours ago