BREAKING NEWS

ಭಾರತದ ಮೇಲೆ ಹಮಾಸ್‌ ಮಾದರಿ ದಾಳಿ ಬೆದರಿಕೆ

ನವದೆಹಲಿ : ಪಂಜಾಬ್‌ ಮೇಲೆ ಭಾರತೀಯ ಸರಕಾರ ತನ್ನ ಅಧಿಪತ್ಯ ಮುಂದುವರಿಸಿದರೆ ಇಸ್ರೇಲ್‌ ಮೇಲೆ ನಡೆದ ಹಮಾಸ್‌ ಉಗ್ರರ ದಾಳಿ ಮಾದರಿಯಲ್ಲೇ ಭಾರತದ ಮೇಲೂ ದಾಳಿ ಮಾಡಲಾಗುವುದು, ಎಂದು ಖಲಿಸ್ತಾನಿ ಬೆಂಬಲಿತ ನಿಷೇಧಿತ ಉಗ್ರಗಾಮಿ ಸಂಘಟನೆ ಸಿಖ್‌ ಫಾರ್‌ ಜಸ್ಟೀಸ್‌ (ಎಸ್‌ಎಫ್‌ಜೆ) ಸಂಘಟನೆ ಬೆದರಿಕೆ ಹಾಕಿದೆ.

ಸಾಮಾಜಿಕ ಜಾಲ ತಾಣದಲ್ಲಿ ಬೆದರಿಕೆ ಹಾಕಿರುವ ವಿಡಿಯೋ ಹಂಚಿಕೊಂಡಿರುವ ಎಸ್‌ಎಫ್‌ಜೆ ಮುಖ್ಯಸ್ಥ ಗುರುಪತ್ವಂತ್ ಸಿಂಗ್‌ ಪನ್ನು, ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧದಿಂದ ಪ್ರಧಾನಿ ಮೋದಿ ಪಾಠ ಕಲಿಯಲಿ. ಪಂಜಾಬ್‌ ಮೇಲೆ ದೌರ್ಜನ್ಯ ಮುಂದುವರಿಸಿದರೆ ಮುಂದೊಂದು ದಿನ ಇದೇ ಸನ್ನಿವೇಶ ಭಾರತದಲ್ಲೂ ಘಟಿಸಲಿದೆ, ಎಂದು ಎಚ್ಚರಿಕೆ ನೀಡಿದ್ದಾನೆ.

ಪಂಜಾಬ್‌ನಿಂದ ಪ್ಯಾಲೆಸ್ತೀನ್‌ವರೆಗೆ ಅಕ್ರಮ ಅತಿಕ್ರಮಣದ ಅಡಿಯಲ್ಲಿರುವ ಜನರು ಪ್ರತಿಕ್ರಿಯೆ ನೀಡುತ್ತಾರೆ. ಹಿಂಸಾಚಾರವು ಹಿಂಸೆಯನ್ನೇ ಪಡೆದುಕೊಳ್ಳುತ್ತದೆ. ನಮ್ಮ ಮಾತೃಭೂಮಿ ಪಂಜಾಬ್‌ ಮೇಲಿನ ಅತಿಕ್ರಮಣ ಮಾಡುವ ಪ್ರವೃತ್ತಿಯನ್ನು ಭಾರತ ಮುಂದುವರಿಸಿದರೆ ಹಮಾಸ್‌ ದಾಳಿಯ ರೀತಿಯಲ್ಲೇ ತಕ್ಕ ಶಾಸ್ತಿ ಮಾಡಲಾಗುತ್ತದೆ. ಇದಕ್ಕೆ ಪ್ರಧಾನಿ ಮೋದಿಯೇ ಹೊಣೆ ಹೊರಬೇಕಾಗುತ್ತದೆ, ಎಂದು ವಿಡಿಯೋದಲ್ಲಿ ಉಗ್ರ ಗುರು ಪತ್ವಂತ್ ಸಿಂಗ್‌ ಪನ್ನು ಬೆದರಿಸಿದ್ದಾನೆ.

ಸಿಖ್‌ ಫಾರ್‌ ಜಸ್ಟೀಸ್‌ ಸಂಘಟನೆ ಲಿಬರೇಷನ್‌ ಆಫ್‌ ಪಂಜಾಬ್‌ ಸ್ಥಾಪನೆಗೆ ಹೋರಾಟ ಮಾಡುತ್ತಿದೆ. ಇದಕ್ಕಾಗಿ ಜನಮತಗಣನೆ ನಡೆಸುವಂತೆ ಬಹುಕಾಲದಿಂದ ಆಗ್ರಹಿಸುತ್ತಿದೆ. ಮತದಾನ ಬೇಕೋ ಅಥವ ಬುಲೆಟ್‌ ಬೇಕೋ ಎಂಬುದನ್ನು ಭಾರತ ಸರಕಾರ ಆಯ್ಕೆ ಮಾಡಿಕೊಳ್ಳಲಿ, ಎಂದು ವಿಡಿಯೋದಲ್ಲಿ ಪನ್ನು ಎಚ್ಚರಿಕೆ ಸಂದೇಶ ನೀಡಿದ್ದಾನೆ.

lokesh

Recent Posts

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

2 hours ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

2 hours ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

2 hours ago

ಶತಾಯುಷಿ ಸುತಾರ್ ವಿಧಿವಶ ; ದೇಶ-ವಿದೇಶ ನಾಯಕರ ಪ್ರತಿಮೆ ಕೆತ್ತಿದ್ದ ಹೆಗ್ಗಳಿಕೆ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸದ್ದು ಮಾಡುತ್ತಿರುವ ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವ

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…

2 hours ago