BREAKING NEWS

ಭಾರತದ ಮೇಲೆ ಹಮಾಸ್‌ ಮಾದರಿ ದಾಳಿ ಬೆದರಿಕೆ

ನವದೆಹಲಿ : ಪಂಜಾಬ್‌ ಮೇಲೆ ಭಾರತೀಯ ಸರಕಾರ ತನ್ನ ಅಧಿಪತ್ಯ ಮುಂದುವರಿಸಿದರೆ ಇಸ್ರೇಲ್‌ ಮೇಲೆ ನಡೆದ ಹಮಾಸ್‌ ಉಗ್ರರ ದಾಳಿ ಮಾದರಿಯಲ್ಲೇ ಭಾರತದ ಮೇಲೂ ದಾಳಿ ಮಾಡಲಾಗುವುದು, ಎಂದು ಖಲಿಸ್ತಾನಿ ಬೆಂಬಲಿತ ನಿಷೇಧಿತ ಉಗ್ರಗಾಮಿ ಸಂಘಟನೆ ಸಿಖ್‌ ಫಾರ್‌ ಜಸ್ಟೀಸ್‌ (ಎಸ್‌ಎಫ್‌ಜೆ) ಸಂಘಟನೆ ಬೆದರಿಕೆ ಹಾಕಿದೆ.

ಸಾಮಾಜಿಕ ಜಾಲ ತಾಣದಲ್ಲಿ ಬೆದರಿಕೆ ಹಾಕಿರುವ ವಿಡಿಯೋ ಹಂಚಿಕೊಂಡಿರುವ ಎಸ್‌ಎಫ್‌ಜೆ ಮುಖ್ಯಸ್ಥ ಗುರುಪತ್ವಂತ್ ಸಿಂಗ್‌ ಪನ್ನು, ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧದಿಂದ ಪ್ರಧಾನಿ ಮೋದಿ ಪಾಠ ಕಲಿಯಲಿ. ಪಂಜಾಬ್‌ ಮೇಲೆ ದೌರ್ಜನ್ಯ ಮುಂದುವರಿಸಿದರೆ ಮುಂದೊಂದು ದಿನ ಇದೇ ಸನ್ನಿವೇಶ ಭಾರತದಲ್ಲೂ ಘಟಿಸಲಿದೆ, ಎಂದು ಎಚ್ಚರಿಕೆ ನೀಡಿದ್ದಾನೆ.

ಪಂಜಾಬ್‌ನಿಂದ ಪ್ಯಾಲೆಸ್ತೀನ್‌ವರೆಗೆ ಅಕ್ರಮ ಅತಿಕ್ರಮಣದ ಅಡಿಯಲ್ಲಿರುವ ಜನರು ಪ್ರತಿಕ್ರಿಯೆ ನೀಡುತ್ತಾರೆ. ಹಿಂಸಾಚಾರವು ಹಿಂಸೆಯನ್ನೇ ಪಡೆದುಕೊಳ್ಳುತ್ತದೆ. ನಮ್ಮ ಮಾತೃಭೂಮಿ ಪಂಜಾಬ್‌ ಮೇಲಿನ ಅತಿಕ್ರಮಣ ಮಾಡುವ ಪ್ರವೃತ್ತಿಯನ್ನು ಭಾರತ ಮುಂದುವರಿಸಿದರೆ ಹಮಾಸ್‌ ದಾಳಿಯ ರೀತಿಯಲ್ಲೇ ತಕ್ಕ ಶಾಸ್ತಿ ಮಾಡಲಾಗುತ್ತದೆ. ಇದಕ್ಕೆ ಪ್ರಧಾನಿ ಮೋದಿಯೇ ಹೊಣೆ ಹೊರಬೇಕಾಗುತ್ತದೆ, ಎಂದು ವಿಡಿಯೋದಲ್ಲಿ ಉಗ್ರ ಗುರು ಪತ್ವಂತ್ ಸಿಂಗ್‌ ಪನ್ನು ಬೆದರಿಸಿದ್ದಾನೆ.

ಸಿಖ್‌ ಫಾರ್‌ ಜಸ್ಟೀಸ್‌ ಸಂಘಟನೆ ಲಿಬರೇಷನ್‌ ಆಫ್‌ ಪಂಜಾಬ್‌ ಸ್ಥಾಪನೆಗೆ ಹೋರಾಟ ಮಾಡುತ್ತಿದೆ. ಇದಕ್ಕಾಗಿ ಜನಮತಗಣನೆ ನಡೆಸುವಂತೆ ಬಹುಕಾಲದಿಂದ ಆಗ್ರಹಿಸುತ್ತಿದೆ. ಮತದಾನ ಬೇಕೋ ಅಥವ ಬುಲೆಟ್‌ ಬೇಕೋ ಎಂಬುದನ್ನು ಭಾರತ ಸರಕಾರ ಆಯ್ಕೆ ಮಾಡಿಕೊಳ್ಳಲಿ, ಎಂದು ವಿಡಿಯೋದಲ್ಲಿ ಪನ್ನು ಎಚ್ಚರಿಕೆ ಸಂದೇಶ ನೀಡಿದ್ದಾನೆ.

lokesh

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

9 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

9 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

9 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

10 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

10 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

10 hours ago