ನವದೆಹಲಿ : ಪಂಜಾಬ್ ಮೇಲೆ ಭಾರತೀಯ ಸರಕಾರ ತನ್ನ ಅಧಿಪತ್ಯ ಮುಂದುವರಿಸಿದರೆ ಇಸ್ರೇಲ್ ಮೇಲೆ ನಡೆದ ಹಮಾಸ್ ಉಗ್ರರ ದಾಳಿ ಮಾದರಿಯಲ್ಲೇ ಭಾರತದ ಮೇಲೂ ದಾಳಿ ಮಾಡಲಾಗುವುದು, ಎಂದು ಖಲಿಸ್ತಾನಿ ಬೆಂಬಲಿತ ನಿಷೇಧಿತ ಉಗ್ರಗಾಮಿ ಸಂಘಟನೆ ಸಿಖ್ ಫಾರ್ ಜಸ್ಟೀಸ್ (ಎಸ್ಎಫ್ಜೆ) ಸಂಘಟನೆ ಬೆದರಿಕೆ ಹಾಕಿದೆ.
ಸಾಮಾಜಿಕ ಜಾಲ ತಾಣದಲ್ಲಿ ಬೆದರಿಕೆ ಹಾಕಿರುವ ವಿಡಿಯೋ ಹಂಚಿಕೊಂಡಿರುವ ಎಸ್ಎಫ್ಜೆ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನು, ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದಿಂದ ಪ್ರಧಾನಿ ಮೋದಿ ಪಾಠ ಕಲಿಯಲಿ. ಪಂಜಾಬ್ ಮೇಲೆ ದೌರ್ಜನ್ಯ ಮುಂದುವರಿಸಿದರೆ ಮುಂದೊಂದು ದಿನ ಇದೇ ಸನ್ನಿವೇಶ ಭಾರತದಲ್ಲೂ ಘಟಿಸಲಿದೆ, ಎಂದು ಎಚ್ಚರಿಕೆ ನೀಡಿದ್ದಾನೆ.
ಪಂಜಾಬ್ನಿಂದ ಪ್ಯಾಲೆಸ್ತೀನ್ವರೆಗೆ ಅಕ್ರಮ ಅತಿಕ್ರಮಣದ ಅಡಿಯಲ್ಲಿರುವ ಜನರು ಪ್ರತಿಕ್ರಿಯೆ ನೀಡುತ್ತಾರೆ. ಹಿಂಸಾಚಾರವು ಹಿಂಸೆಯನ್ನೇ ಪಡೆದುಕೊಳ್ಳುತ್ತದೆ. ನಮ್ಮ ಮಾತೃಭೂಮಿ ಪಂಜಾಬ್ ಮೇಲಿನ ಅತಿಕ್ರಮಣ ಮಾಡುವ ಪ್ರವೃತ್ತಿಯನ್ನು ಭಾರತ ಮುಂದುವರಿಸಿದರೆ ಹಮಾಸ್ ದಾಳಿಯ ರೀತಿಯಲ್ಲೇ ತಕ್ಕ ಶಾಸ್ತಿ ಮಾಡಲಾಗುತ್ತದೆ. ಇದಕ್ಕೆ ಪ್ರಧಾನಿ ಮೋದಿಯೇ ಹೊಣೆ ಹೊರಬೇಕಾಗುತ್ತದೆ, ಎಂದು ವಿಡಿಯೋದಲ್ಲಿ ಉಗ್ರ ಗುರು ಪತ್ವಂತ್ ಸಿಂಗ್ ಪನ್ನು ಬೆದರಿಸಿದ್ದಾನೆ.
ಸಿಖ್ ಫಾರ್ ಜಸ್ಟೀಸ್ ಸಂಘಟನೆ ಲಿಬರೇಷನ್ ಆಫ್ ಪಂಜಾಬ್ ಸ್ಥಾಪನೆಗೆ ಹೋರಾಟ ಮಾಡುತ್ತಿದೆ. ಇದಕ್ಕಾಗಿ ಜನಮತಗಣನೆ ನಡೆಸುವಂತೆ ಬಹುಕಾಲದಿಂದ ಆಗ್ರಹಿಸುತ್ತಿದೆ. ಮತದಾನ ಬೇಕೋ ಅಥವ ಬುಲೆಟ್ ಬೇಕೋ ಎಂಬುದನ್ನು ಭಾರತ ಸರಕಾರ ಆಯ್ಕೆ ಮಾಡಿಕೊಳ್ಳಲಿ, ಎಂದು ವಿಡಿಯೋದಲ್ಲಿ ಪನ್ನು ಎಚ್ಚರಿಕೆ ಸಂದೇಶ ನೀಡಿದ್ದಾನೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…