ನವದೆಹಲಿ : ಪಂಜಾಬ್ ಮೇಲೆ ಭಾರತೀಯ ಸರಕಾರ ತನ್ನ ಅಧಿಪತ್ಯ ಮುಂದುವರಿಸಿದರೆ ಇಸ್ರೇಲ್ ಮೇಲೆ ನಡೆದ ಹಮಾಸ್ ಉಗ್ರರ ದಾಳಿ ಮಾದರಿಯಲ್ಲೇ ಭಾರತದ ಮೇಲೂ ದಾಳಿ ಮಾಡಲಾಗುವುದು, ಎಂದು ಖಲಿಸ್ತಾನಿ ಬೆಂಬಲಿತ ನಿಷೇಧಿತ ಉಗ್ರಗಾಮಿ ಸಂಘಟನೆ ಸಿಖ್ ಫಾರ್ ಜಸ್ಟೀಸ್ (ಎಸ್ಎಫ್ಜೆ) ಸಂಘಟನೆ ಬೆದರಿಕೆ ಹಾಕಿದೆ.
ಸಾಮಾಜಿಕ ಜಾಲ ತಾಣದಲ್ಲಿ ಬೆದರಿಕೆ ಹಾಕಿರುವ ವಿಡಿಯೋ ಹಂಚಿಕೊಂಡಿರುವ ಎಸ್ಎಫ್ಜೆ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನು, ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದಿಂದ ಪ್ರಧಾನಿ ಮೋದಿ ಪಾಠ ಕಲಿಯಲಿ. ಪಂಜಾಬ್ ಮೇಲೆ ದೌರ್ಜನ್ಯ ಮುಂದುವರಿಸಿದರೆ ಮುಂದೊಂದು ದಿನ ಇದೇ ಸನ್ನಿವೇಶ ಭಾರತದಲ್ಲೂ ಘಟಿಸಲಿದೆ, ಎಂದು ಎಚ್ಚರಿಕೆ ನೀಡಿದ್ದಾನೆ.
ಪಂಜಾಬ್ನಿಂದ ಪ್ಯಾಲೆಸ್ತೀನ್ವರೆಗೆ ಅಕ್ರಮ ಅತಿಕ್ರಮಣದ ಅಡಿಯಲ್ಲಿರುವ ಜನರು ಪ್ರತಿಕ್ರಿಯೆ ನೀಡುತ್ತಾರೆ. ಹಿಂಸಾಚಾರವು ಹಿಂಸೆಯನ್ನೇ ಪಡೆದುಕೊಳ್ಳುತ್ತದೆ. ನಮ್ಮ ಮಾತೃಭೂಮಿ ಪಂಜಾಬ್ ಮೇಲಿನ ಅತಿಕ್ರಮಣ ಮಾಡುವ ಪ್ರವೃತ್ತಿಯನ್ನು ಭಾರತ ಮುಂದುವರಿಸಿದರೆ ಹಮಾಸ್ ದಾಳಿಯ ರೀತಿಯಲ್ಲೇ ತಕ್ಕ ಶಾಸ್ತಿ ಮಾಡಲಾಗುತ್ತದೆ. ಇದಕ್ಕೆ ಪ್ರಧಾನಿ ಮೋದಿಯೇ ಹೊಣೆ ಹೊರಬೇಕಾಗುತ್ತದೆ, ಎಂದು ವಿಡಿಯೋದಲ್ಲಿ ಉಗ್ರ ಗುರು ಪತ್ವಂತ್ ಸಿಂಗ್ ಪನ್ನು ಬೆದರಿಸಿದ್ದಾನೆ.
ಸಿಖ್ ಫಾರ್ ಜಸ್ಟೀಸ್ ಸಂಘಟನೆ ಲಿಬರೇಷನ್ ಆಫ್ ಪಂಜಾಬ್ ಸ್ಥಾಪನೆಗೆ ಹೋರಾಟ ಮಾಡುತ್ತಿದೆ. ಇದಕ್ಕಾಗಿ ಜನಮತಗಣನೆ ನಡೆಸುವಂತೆ ಬಹುಕಾಲದಿಂದ ಆಗ್ರಹಿಸುತ್ತಿದೆ. ಮತದಾನ ಬೇಕೋ ಅಥವ ಬುಲೆಟ್ ಬೇಕೋ ಎಂಬುದನ್ನು ಭಾರತ ಸರಕಾರ ಆಯ್ಕೆ ಮಾಡಿಕೊಳ್ಳಲಿ, ಎಂದು ವಿಡಿಯೋದಲ್ಲಿ ಪನ್ನು ಎಚ್ಚರಿಕೆ ಸಂದೇಶ ನೀಡಿದ್ದಾನೆ.
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…
ಮೈಸೂರು: ನಗರದ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ…