BREAKING NEWS

ಭಾರತದ ಮೇಲೆ ಹಮಾಸ್‌ ಮಾದರಿ ದಾಳಿ ಬೆದರಿಕೆ

ನವದೆಹಲಿ : ಪಂಜಾಬ್‌ ಮೇಲೆ ಭಾರತೀಯ ಸರಕಾರ ತನ್ನ ಅಧಿಪತ್ಯ ಮುಂದುವರಿಸಿದರೆ ಇಸ್ರೇಲ್‌ ಮೇಲೆ ನಡೆದ ಹಮಾಸ್‌ ಉಗ್ರರ ದಾಳಿ ಮಾದರಿಯಲ್ಲೇ ಭಾರತದ ಮೇಲೂ ದಾಳಿ ಮಾಡಲಾಗುವುದು, ಎಂದು ಖಲಿಸ್ತಾನಿ ಬೆಂಬಲಿತ ನಿಷೇಧಿತ ಉಗ್ರಗಾಮಿ ಸಂಘಟನೆ ಸಿಖ್‌ ಫಾರ್‌ ಜಸ್ಟೀಸ್‌ (ಎಸ್‌ಎಫ್‌ಜೆ) ಸಂಘಟನೆ ಬೆದರಿಕೆ ಹಾಕಿದೆ.

ಸಾಮಾಜಿಕ ಜಾಲ ತಾಣದಲ್ಲಿ ಬೆದರಿಕೆ ಹಾಕಿರುವ ವಿಡಿಯೋ ಹಂಚಿಕೊಂಡಿರುವ ಎಸ್‌ಎಫ್‌ಜೆ ಮುಖ್ಯಸ್ಥ ಗುರುಪತ್ವಂತ್ ಸಿಂಗ್‌ ಪನ್ನು, ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧದಿಂದ ಪ್ರಧಾನಿ ಮೋದಿ ಪಾಠ ಕಲಿಯಲಿ. ಪಂಜಾಬ್‌ ಮೇಲೆ ದೌರ್ಜನ್ಯ ಮುಂದುವರಿಸಿದರೆ ಮುಂದೊಂದು ದಿನ ಇದೇ ಸನ್ನಿವೇಶ ಭಾರತದಲ್ಲೂ ಘಟಿಸಲಿದೆ, ಎಂದು ಎಚ್ಚರಿಕೆ ನೀಡಿದ್ದಾನೆ.

ಪಂಜಾಬ್‌ನಿಂದ ಪ್ಯಾಲೆಸ್ತೀನ್‌ವರೆಗೆ ಅಕ್ರಮ ಅತಿಕ್ರಮಣದ ಅಡಿಯಲ್ಲಿರುವ ಜನರು ಪ್ರತಿಕ್ರಿಯೆ ನೀಡುತ್ತಾರೆ. ಹಿಂಸಾಚಾರವು ಹಿಂಸೆಯನ್ನೇ ಪಡೆದುಕೊಳ್ಳುತ್ತದೆ. ನಮ್ಮ ಮಾತೃಭೂಮಿ ಪಂಜಾಬ್‌ ಮೇಲಿನ ಅತಿಕ್ರಮಣ ಮಾಡುವ ಪ್ರವೃತ್ತಿಯನ್ನು ಭಾರತ ಮುಂದುವರಿಸಿದರೆ ಹಮಾಸ್‌ ದಾಳಿಯ ರೀತಿಯಲ್ಲೇ ತಕ್ಕ ಶಾಸ್ತಿ ಮಾಡಲಾಗುತ್ತದೆ. ಇದಕ್ಕೆ ಪ್ರಧಾನಿ ಮೋದಿಯೇ ಹೊಣೆ ಹೊರಬೇಕಾಗುತ್ತದೆ, ಎಂದು ವಿಡಿಯೋದಲ್ಲಿ ಉಗ್ರ ಗುರು ಪತ್ವಂತ್ ಸಿಂಗ್‌ ಪನ್ನು ಬೆದರಿಸಿದ್ದಾನೆ.

ಸಿಖ್‌ ಫಾರ್‌ ಜಸ್ಟೀಸ್‌ ಸಂಘಟನೆ ಲಿಬರೇಷನ್‌ ಆಫ್‌ ಪಂಜಾಬ್‌ ಸ್ಥಾಪನೆಗೆ ಹೋರಾಟ ಮಾಡುತ್ತಿದೆ. ಇದಕ್ಕಾಗಿ ಜನಮತಗಣನೆ ನಡೆಸುವಂತೆ ಬಹುಕಾಲದಿಂದ ಆಗ್ರಹಿಸುತ್ತಿದೆ. ಮತದಾನ ಬೇಕೋ ಅಥವ ಬುಲೆಟ್‌ ಬೇಕೋ ಎಂಬುದನ್ನು ಭಾರತ ಸರಕಾರ ಆಯ್ಕೆ ಮಾಡಿಕೊಳ್ಳಲಿ, ಎಂದು ವಿಡಿಯೋದಲ್ಲಿ ಪನ್ನು ಎಚ್ಚರಿಕೆ ಸಂದೇಶ ನೀಡಿದ್ದಾನೆ.

lokesh

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago