BREAKING NEWS

ಎಚ್‌ಎಎಲ್‌ನಿಂದ ವಾಯುಪಡೆಗೆ ಮೊದಲ ತರಬೇತಿ ಯುದ್ಧ ವಿಮಾನ ಹಸ್ತಾಂತರ

ನವದೆಹಲಿ : ದೇಶದ ಹೆಮ್ಮೆಯ ಸರ್ಕಾರಿ ಸ್ವಾಮ್ಯದ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ತಾನು ಅಭಿವೃದ್ಧಿಪಡಿಸಿದ ಲಘು ಯುದ್ಧ ವಿಮಾನ ತೇಜಸ್‌ ಅನ್ನು ವಾಯುಪಡೆಗೆ ಬುಧವಾರ ಹಸ್ತಾಂತರಿಸಿದೆ. ಇದು ತರಬೇತಿ ವಿಮಾನವಾಗಿದ್ದು, ಸ್ವದೇಶಿ ನಿರ್ಮಿತ ಈ ಅತ್ಯಾಧುನಿಕ ತೇಜಸ್‌ ತರಬೇತಿ ವಿಮಾನವು ಯುದ್ಧ ವಿಮಾನಗಳೊಂದಿಗೆ ವಾಯುಪಡೆಯ ಬಲ ವೃದ್ಧಿಸಲಿದೆ.

ಇಬ್ಬರು ಕುಳಿತುಕೊಳ್ಳಬಹುದಾದ 18 ಎಲ್‌ಸಿಎ ತೇಜಸ್‌ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಪೂರೈಸುವ ಸಂಬಂಧ ಈ ಹಿಂದೆಯೇ ಒಪ್ಪಂದ ಏರ್ಪಟ್ಟಿದೆ. ಅದರ ಅನುಸಾರ ಬುಧವಾರ ಮೊದಲ ಎಲ್‌ಸಿಎ ತೇಜಸ್‌ ಯುದ್ಧ ವಿಮಾನವನು ಎಚ್‌ಎಎಲ್‌, ಭಾರತೀಯ ವಾಯುಪಡೆಗೆ ಹಸ್ತಾಂತರಿಸಿದೆ.

ಹಸ್ತಾಂತರ ಕಾರ್ಯಕ್ರಮದಲ್ಲಿ ರಕ್ಷಣಾ ಖಾತೆಯ ಸಹಾಯಕ ಸಚಿವ ಅಜಯ್‌ ಭಟ್‌ ಹಾಗೂ ಏರ್‌ ಚೀಫ್‌ ಮಾರ್ಷಲ್‌ ವಿ.ಆರ್‌. ಚೌಧರಿ ಹಾಗೂ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಮುಖ್ಯಸ್ಥರು ಹಾಜರಿದ್ದರು.

2023 – 24ನೇ ಸಾಲಿನಲ್ಲಿ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ 8 ಎಲ್‌ಸಿಎ ತೇಜಸ್‌ ವಿಮಾನಗಳನ್ನು ವಾಯುಪಡೆಗೆ ಪೂರೈಸಲಿದೆ. 2026 – 27ನೇ ಸಾಲಿನಲ್ಲಿ ಉಳಿದ 10 ಯುದ್ಧ ವಿಮಾನಗಳನ್ನು ಎಚ್‌ಎಎಲ್‌ ಪೂರೈಸಲಿದೆ.

ರಕ್ಷಣಾ ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಇದೊಂದು ದಿಟ್ಟ ಹೆಜ್ಜೆಯಾಗಿದೆ. ಅತ್ಯಾಧುನಿಕ ಯುದ್ಧ ವಿಮಾನದ ಮೂಲಕ ಭಾರತೀಯ ವಾಯುಪಡೆಯ ಪೈಲಟ್‌ಗಳಿಗೆ ತರಬೇತಿ ನೀಡಲು ಇದರಿಂದ ಅನುಕೂಲವಾಗಲಿದೆ. ವ್ಯೂಹಾತ್ಮಕ ತಂತ್ರಗಾರಿಕೆ ರೂಪಿಸುವಲ್ಲಿ ಈ ಯುದ್ಧ ವಿಮಾನಗಳು ಮಹತ್ವದ ಪಾತ್ರ ವಹಿಸಲಿವೆ, ಎಂದು ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಹೇಳಿದೆ.

ಬಲಿಷ್ಠ ಎಂಜಿನ್‌, ಅತ್ಯಾಧುನಿಕ ಗ್ಲಾಸ್‌ ಕಾಕ್‌ಪಿಟ್‌, ಇಂಟಿಗ್ರೇಟೆಡ್‌ ಡಿಜಿಟಲ್‌ ಏವಿಯಾನಿಕ್ಸ್‌ ಸಿಸ್ಟಮ್ಸ್‌ ಮತ್ತು ಅಡ್ವಾನ್ಸ್ಡ್‌ ಫ್ಲೈಟ್‌ ಕಂಟ್ರೋಲ್‌ ಸಿಸ್ಟಮ್ಸ್‌ ಸೇರಿದಂತೆ ಅನೇಕ ತಾಂತ್ರಿಕ ವೈಶಿಷ್ಟ್ಯತೆಗಳನ್ನು ಈ ಎಲ್‌ಸಿಎ ತೇಜಸ್‌ ಯುದ್ಧ ವಿಮಾನಗಳು ಹೊಂದಿವೆ.

lokesh

Recent Posts

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

59 mins ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

1 hour ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

1 hour ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

2 hours ago

ಶತಾಯುಷಿ ಸುತಾರ್ ವಿಧಿವಶ ; ದೇಶ-ವಿದೇಶ ನಾಯಕರ ಪ್ರತಿಮೆ ಕೆತ್ತಿದ್ದ ಹೆಗ್ಗಳಿಕೆ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸದ್ದು ಮಾಡುತ್ತಿರುವ ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವ

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…

2 hours ago