ನವದೆಹಲಿ : ದೇಶದ ಹೆಮ್ಮೆಯ ಸರ್ಕಾರಿ ಸ್ವಾಮ್ಯದ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ತಾನು ಅಭಿವೃದ್ಧಿಪಡಿಸಿದ ಲಘು ಯುದ್ಧ ವಿಮಾನ ತೇಜಸ್ ಅನ್ನು ವಾಯುಪಡೆಗೆ ಬುಧವಾರ ಹಸ್ತಾಂತರಿಸಿದೆ. ಇದು ತರಬೇತಿ ವಿಮಾನವಾಗಿದ್ದು, ಸ್ವದೇಶಿ ನಿರ್ಮಿತ ಈ ಅತ್ಯಾಧುನಿಕ ತೇಜಸ್ ತರಬೇತಿ ವಿಮಾನವು ಯುದ್ಧ ವಿಮಾನಗಳೊಂದಿಗೆ ವಾಯುಪಡೆಯ ಬಲ ವೃದ್ಧಿಸಲಿದೆ.
ಇಬ್ಬರು ಕುಳಿತುಕೊಳ್ಳಬಹುದಾದ 18 ಎಲ್ಸಿಎ ತೇಜಸ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಪೂರೈಸುವ ಸಂಬಂಧ ಈ ಹಿಂದೆಯೇ ಒಪ್ಪಂದ ಏರ್ಪಟ್ಟಿದೆ. ಅದರ ಅನುಸಾರ ಬುಧವಾರ ಮೊದಲ ಎಲ್ಸಿಎ ತೇಜಸ್ ಯುದ್ಧ ವಿಮಾನವನು ಎಚ್ಎಎಲ್, ಭಾರತೀಯ ವಾಯುಪಡೆಗೆ ಹಸ್ತಾಂತರಿಸಿದೆ.
ಹಸ್ತಾಂತರ ಕಾರ್ಯಕ್ರಮದಲ್ಲಿ ರಕ್ಷಣಾ ಖಾತೆಯ ಸಹಾಯಕ ಸಚಿವ ಅಜಯ್ ಭಟ್ ಹಾಗೂ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಹಾಗೂ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಮುಖ್ಯಸ್ಥರು ಹಾಜರಿದ್ದರು.
2023 – 24ನೇ ಸಾಲಿನಲ್ಲಿ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ 8 ಎಲ್ಸಿಎ ತೇಜಸ್ ವಿಮಾನಗಳನ್ನು ವಾಯುಪಡೆಗೆ ಪೂರೈಸಲಿದೆ. 2026 – 27ನೇ ಸಾಲಿನಲ್ಲಿ ಉಳಿದ 10 ಯುದ್ಧ ವಿಮಾನಗಳನ್ನು ಎಚ್ಎಎಲ್ ಪೂರೈಸಲಿದೆ.
ರಕ್ಷಣಾ ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಇದೊಂದು ದಿಟ್ಟ ಹೆಜ್ಜೆಯಾಗಿದೆ. ಅತ್ಯಾಧುನಿಕ ಯುದ್ಧ ವಿಮಾನದ ಮೂಲಕ ಭಾರತೀಯ ವಾಯುಪಡೆಯ ಪೈಲಟ್ಗಳಿಗೆ ತರಬೇತಿ ನೀಡಲು ಇದರಿಂದ ಅನುಕೂಲವಾಗಲಿದೆ. ವ್ಯೂಹಾತ್ಮಕ ತಂತ್ರಗಾರಿಕೆ ರೂಪಿಸುವಲ್ಲಿ ಈ ಯುದ್ಧ ವಿಮಾನಗಳು ಮಹತ್ವದ ಪಾತ್ರ ವಹಿಸಲಿವೆ, ಎಂದು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಹೇಳಿದೆ.
ಬಲಿಷ್ಠ ಎಂಜಿನ್, ಅತ್ಯಾಧುನಿಕ ಗ್ಲಾಸ್ ಕಾಕ್ಪಿಟ್, ಇಂಟಿಗ್ರೇಟೆಡ್ ಡಿಜಿಟಲ್ ಏವಿಯಾನಿಕ್ಸ್ ಸಿಸ್ಟಮ್ಸ್ ಮತ್ತು ಅಡ್ವಾನ್ಸ್ಡ್ ಫ್ಲೈಟ್ ಕಂಟ್ರೋಲ್ ಸಿಸ್ಟಮ್ಸ್ ಸೇರಿದಂತೆ ಅನೇಕ ತಾಂತ್ರಿಕ ವೈಶಿಷ್ಟ್ಯತೆಗಳನ್ನು ಈ ಎಲ್ಸಿಎ ತೇಜಸ್ ಯುದ್ಧ ವಿಮಾನಗಳು ಹೊಂದಿವೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…