BREAKING NEWS

ಎಚ್‌ಎಎಲ್‌ನಿಂದ ವಾಯುಪಡೆಗೆ ಮೊದಲ ತರಬೇತಿ ಯುದ್ಧ ವಿಮಾನ ಹಸ್ತಾಂತರ

ನವದೆಹಲಿ : ದೇಶದ ಹೆಮ್ಮೆಯ ಸರ್ಕಾರಿ ಸ್ವಾಮ್ಯದ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ತಾನು ಅಭಿವೃದ್ಧಿಪಡಿಸಿದ ಲಘು ಯುದ್ಧ ವಿಮಾನ ತೇಜಸ್‌ ಅನ್ನು ವಾಯುಪಡೆಗೆ ಬುಧವಾರ ಹಸ್ತಾಂತರಿಸಿದೆ. ಇದು ತರಬೇತಿ ವಿಮಾನವಾಗಿದ್ದು, ಸ್ವದೇಶಿ ನಿರ್ಮಿತ ಈ ಅತ್ಯಾಧುನಿಕ ತೇಜಸ್‌ ತರಬೇತಿ ವಿಮಾನವು ಯುದ್ಧ ವಿಮಾನಗಳೊಂದಿಗೆ ವಾಯುಪಡೆಯ ಬಲ ವೃದ್ಧಿಸಲಿದೆ.

ಇಬ್ಬರು ಕುಳಿತುಕೊಳ್ಳಬಹುದಾದ 18 ಎಲ್‌ಸಿಎ ತೇಜಸ್‌ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಪೂರೈಸುವ ಸಂಬಂಧ ಈ ಹಿಂದೆಯೇ ಒಪ್ಪಂದ ಏರ್ಪಟ್ಟಿದೆ. ಅದರ ಅನುಸಾರ ಬುಧವಾರ ಮೊದಲ ಎಲ್‌ಸಿಎ ತೇಜಸ್‌ ಯುದ್ಧ ವಿಮಾನವನು ಎಚ್‌ಎಎಲ್‌, ಭಾರತೀಯ ವಾಯುಪಡೆಗೆ ಹಸ್ತಾಂತರಿಸಿದೆ.

ಹಸ್ತಾಂತರ ಕಾರ್ಯಕ್ರಮದಲ್ಲಿ ರಕ್ಷಣಾ ಖಾತೆಯ ಸಹಾಯಕ ಸಚಿವ ಅಜಯ್‌ ಭಟ್‌ ಹಾಗೂ ಏರ್‌ ಚೀಫ್‌ ಮಾರ್ಷಲ್‌ ವಿ.ಆರ್‌. ಚೌಧರಿ ಹಾಗೂ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಮುಖ್ಯಸ್ಥರು ಹಾಜರಿದ್ದರು.

2023 – 24ನೇ ಸಾಲಿನಲ್ಲಿ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ 8 ಎಲ್‌ಸಿಎ ತೇಜಸ್‌ ವಿಮಾನಗಳನ್ನು ವಾಯುಪಡೆಗೆ ಪೂರೈಸಲಿದೆ. 2026 – 27ನೇ ಸಾಲಿನಲ್ಲಿ ಉಳಿದ 10 ಯುದ್ಧ ವಿಮಾನಗಳನ್ನು ಎಚ್‌ಎಎಲ್‌ ಪೂರೈಸಲಿದೆ.

ರಕ್ಷಣಾ ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಇದೊಂದು ದಿಟ್ಟ ಹೆಜ್ಜೆಯಾಗಿದೆ. ಅತ್ಯಾಧುನಿಕ ಯುದ್ಧ ವಿಮಾನದ ಮೂಲಕ ಭಾರತೀಯ ವಾಯುಪಡೆಯ ಪೈಲಟ್‌ಗಳಿಗೆ ತರಬೇತಿ ನೀಡಲು ಇದರಿಂದ ಅನುಕೂಲವಾಗಲಿದೆ. ವ್ಯೂಹಾತ್ಮಕ ತಂತ್ರಗಾರಿಕೆ ರೂಪಿಸುವಲ್ಲಿ ಈ ಯುದ್ಧ ವಿಮಾನಗಳು ಮಹತ್ವದ ಪಾತ್ರ ವಹಿಸಲಿವೆ, ಎಂದು ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಹೇಳಿದೆ.

ಬಲಿಷ್ಠ ಎಂಜಿನ್‌, ಅತ್ಯಾಧುನಿಕ ಗ್ಲಾಸ್‌ ಕಾಕ್‌ಪಿಟ್‌, ಇಂಟಿಗ್ರೇಟೆಡ್‌ ಡಿಜಿಟಲ್‌ ಏವಿಯಾನಿಕ್ಸ್‌ ಸಿಸ್ಟಮ್ಸ್‌ ಮತ್ತು ಅಡ್ವಾನ್ಸ್ಡ್‌ ಫ್ಲೈಟ್‌ ಕಂಟ್ರೋಲ್‌ ಸಿಸ್ಟಮ್ಸ್‌ ಸೇರಿದಂತೆ ಅನೇಕ ತಾಂತ್ರಿಕ ವೈಶಿಷ್ಟ್ಯತೆಗಳನ್ನು ಈ ಎಲ್‌ಸಿಎ ತೇಜಸ್‌ ಯುದ್ಧ ವಿಮಾನಗಳು ಹೊಂದಿವೆ.

lokesh

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

3 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

6 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

6 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

7 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

7 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

7 hours ago