BREAKING NEWS

ಎಚ್‌ಎಎಲ್‌ನಿಂದ ವಾಯುಪಡೆಗೆ ಮೊದಲ ತರಬೇತಿ ಯುದ್ಧ ವಿಮಾನ ಹಸ್ತಾಂತರ

ನವದೆಹಲಿ : ದೇಶದ ಹೆಮ್ಮೆಯ ಸರ್ಕಾರಿ ಸ್ವಾಮ್ಯದ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ತಾನು ಅಭಿವೃದ್ಧಿಪಡಿಸಿದ ಲಘು ಯುದ್ಧ ವಿಮಾನ ತೇಜಸ್‌ ಅನ್ನು ವಾಯುಪಡೆಗೆ ಬುಧವಾರ ಹಸ್ತಾಂತರಿಸಿದೆ. ಇದು ತರಬೇತಿ ವಿಮಾನವಾಗಿದ್ದು, ಸ್ವದೇಶಿ ನಿರ್ಮಿತ ಈ ಅತ್ಯಾಧುನಿಕ ತೇಜಸ್‌ ತರಬೇತಿ ವಿಮಾನವು ಯುದ್ಧ ವಿಮಾನಗಳೊಂದಿಗೆ ವಾಯುಪಡೆಯ ಬಲ ವೃದ್ಧಿಸಲಿದೆ.

ಇಬ್ಬರು ಕುಳಿತುಕೊಳ್ಳಬಹುದಾದ 18 ಎಲ್‌ಸಿಎ ತೇಜಸ್‌ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಪೂರೈಸುವ ಸಂಬಂಧ ಈ ಹಿಂದೆಯೇ ಒಪ್ಪಂದ ಏರ್ಪಟ್ಟಿದೆ. ಅದರ ಅನುಸಾರ ಬುಧವಾರ ಮೊದಲ ಎಲ್‌ಸಿಎ ತೇಜಸ್‌ ಯುದ್ಧ ವಿಮಾನವನು ಎಚ್‌ಎಎಲ್‌, ಭಾರತೀಯ ವಾಯುಪಡೆಗೆ ಹಸ್ತಾಂತರಿಸಿದೆ.

ಹಸ್ತಾಂತರ ಕಾರ್ಯಕ್ರಮದಲ್ಲಿ ರಕ್ಷಣಾ ಖಾತೆಯ ಸಹಾಯಕ ಸಚಿವ ಅಜಯ್‌ ಭಟ್‌ ಹಾಗೂ ಏರ್‌ ಚೀಫ್‌ ಮಾರ್ಷಲ್‌ ವಿ.ಆರ್‌. ಚೌಧರಿ ಹಾಗೂ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಮುಖ್ಯಸ್ಥರು ಹಾಜರಿದ್ದರು.

2023 – 24ನೇ ಸಾಲಿನಲ್ಲಿ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ 8 ಎಲ್‌ಸಿಎ ತೇಜಸ್‌ ವಿಮಾನಗಳನ್ನು ವಾಯುಪಡೆಗೆ ಪೂರೈಸಲಿದೆ. 2026 – 27ನೇ ಸಾಲಿನಲ್ಲಿ ಉಳಿದ 10 ಯುದ್ಧ ವಿಮಾನಗಳನ್ನು ಎಚ್‌ಎಎಲ್‌ ಪೂರೈಸಲಿದೆ.

ರಕ್ಷಣಾ ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಇದೊಂದು ದಿಟ್ಟ ಹೆಜ್ಜೆಯಾಗಿದೆ. ಅತ್ಯಾಧುನಿಕ ಯುದ್ಧ ವಿಮಾನದ ಮೂಲಕ ಭಾರತೀಯ ವಾಯುಪಡೆಯ ಪೈಲಟ್‌ಗಳಿಗೆ ತರಬೇತಿ ನೀಡಲು ಇದರಿಂದ ಅನುಕೂಲವಾಗಲಿದೆ. ವ್ಯೂಹಾತ್ಮಕ ತಂತ್ರಗಾರಿಕೆ ರೂಪಿಸುವಲ್ಲಿ ಈ ಯುದ್ಧ ವಿಮಾನಗಳು ಮಹತ್ವದ ಪಾತ್ರ ವಹಿಸಲಿವೆ, ಎಂದು ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಹೇಳಿದೆ.

ಬಲಿಷ್ಠ ಎಂಜಿನ್‌, ಅತ್ಯಾಧುನಿಕ ಗ್ಲಾಸ್‌ ಕಾಕ್‌ಪಿಟ್‌, ಇಂಟಿಗ್ರೇಟೆಡ್‌ ಡಿಜಿಟಲ್‌ ಏವಿಯಾನಿಕ್ಸ್‌ ಸಿಸ್ಟಮ್ಸ್‌ ಮತ್ತು ಅಡ್ವಾನ್ಸ್ಡ್‌ ಫ್ಲೈಟ್‌ ಕಂಟ್ರೋಲ್‌ ಸಿಸ್ಟಮ್ಸ್‌ ಸೇರಿದಂತೆ ಅನೇಕ ತಾಂತ್ರಿಕ ವೈಶಿಷ್ಟ್ಯತೆಗಳನ್ನು ಈ ಎಲ್‌ಸಿಎ ತೇಜಸ್‌ ಯುದ್ಧ ವಿಮಾನಗಳು ಹೊಂದಿವೆ.

lokesh

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

3 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

5 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

6 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

6 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

8 hours ago