BREAKING NEWS

ಎಚ್‌ಎಎಲ್‌ನಿಂದ ವಾಯುಪಡೆಗೆ ಮೊದಲ ತರಬೇತಿ ಯುದ್ಧ ವಿಮಾನ ಹಸ್ತಾಂತರ

ನವದೆಹಲಿ : ದೇಶದ ಹೆಮ್ಮೆಯ ಸರ್ಕಾರಿ ಸ್ವಾಮ್ಯದ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ತಾನು ಅಭಿವೃದ್ಧಿಪಡಿಸಿದ ಲಘು ಯುದ್ಧ ವಿಮಾನ ತೇಜಸ್‌ ಅನ್ನು ವಾಯುಪಡೆಗೆ ಬುಧವಾರ ಹಸ್ತಾಂತರಿಸಿದೆ. ಇದು ತರಬೇತಿ ವಿಮಾನವಾಗಿದ್ದು, ಸ್ವದೇಶಿ ನಿರ್ಮಿತ ಈ ಅತ್ಯಾಧುನಿಕ ತೇಜಸ್‌ ತರಬೇತಿ ವಿಮಾನವು ಯುದ್ಧ ವಿಮಾನಗಳೊಂದಿಗೆ ವಾಯುಪಡೆಯ ಬಲ ವೃದ್ಧಿಸಲಿದೆ.

ಇಬ್ಬರು ಕುಳಿತುಕೊಳ್ಳಬಹುದಾದ 18 ಎಲ್‌ಸಿಎ ತೇಜಸ್‌ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಪೂರೈಸುವ ಸಂಬಂಧ ಈ ಹಿಂದೆಯೇ ಒಪ್ಪಂದ ಏರ್ಪಟ್ಟಿದೆ. ಅದರ ಅನುಸಾರ ಬುಧವಾರ ಮೊದಲ ಎಲ್‌ಸಿಎ ತೇಜಸ್‌ ಯುದ್ಧ ವಿಮಾನವನು ಎಚ್‌ಎಎಲ್‌, ಭಾರತೀಯ ವಾಯುಪಡೆಗೆ ಹಸ್ತಾಂತರಿಸಿದೆ.

ಹಸ್ತಾಂತರ ಕಾರ್ಯಕ್ರಮದಲ್ಲಿ ರಕ್ಷಣಾ ಖಾತೆಯ ಸಹಾಯಕ ಸಚಿವ ಅಜಯ್‌ ಭಟ್‌ ಹಾಗೂ ಏರ್‌ ಚೀಫ್‌ ಮಾರ್ಷಲ್‌ ವಿ.ಆರ್‌. ಚೌಧರಿ ಹಾಗೂ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಮುಖ್ಯಸ್ಥರು ಹಾಜರಿದ್ದರು.

2023 – 24ನೇ ಸಾಲಿನಲ್ಲಿ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ 8 ಎಲ್‌ಸಿಎ ತೇಜಸ್‌ ವಿಮಾನಗಳನ್ನು ವಾಯುಪಡೆಗೆ ಪೂರೈಸಲಿದೆ. 2026 – 27ನೇ ಸಾಲಿನಲ್ಲಿ ಉಳಿದ 10 ಯುದ್ಧ ವಿಮಾನಗಳನ್ನು ಎಚ್‌ಎಎಲ್‌ ಪೂರೈಸಲಿದೆ.

ರಕ್ಷಣಾ ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಇದೊಂದು ದಿಟ್ಟ ಹೆಜ್ಜೆಯಾಗಿದೆ. ಅತ್ಯಾಧುನಿಕ ಯುದ್ಧ ವಿಮಾನದ ಮೂಲಕ ಭಾರತೀಯ ವಾಯುಪಡೆಯ ಪೈಲಟ್‌ಗಳಿಗೆ ತರಬೇತಿ ನೀಡಲು ಇದರಿಂದ ಅನುಕೂಲವಾಗಲಿದೆ. ವ್ಯೂಹಾತ್ಮಕ ತಂತ್ರಗಾರಿಕೆ ರೂಪಿಸುವಲ್ಲಿ ಈ ಯುದ್ಧ ವಿಮಾನಗಳು ಮಹತ್ವದ ಪಾತ್ರ ವಹಿಸಲಿವೆ, ಎಂದು ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಹೇಳಿದೆ.

ಬಲಿಷ್ಠ ಎಂಜಿನ್‌, ಅತ್ಯಾಧುನಿಕ ಗ್ಲಾಸ್‌ ಕಾಕ್‌ಪಿಟ್‌, ಇಂಟಿಗ್ರೇಟೆಡ್‌ ಡಿಜಿಟಲ್‌ ಏವಿಯಾನಿಕ್ಸ್‌ ಸಿಸ್ಟಮ್ಸ್‌ ಮತ್ತು ಅಡ್ವಾನ್ಸ್ಡ್‌ ಫ್ಲೈಟ್‌ ಕಂಟ್ರೋಲ್‌ ಸಿಸ್ಟಮ್ಸ್‌ ಸೇರಿದಂತೆ ಅನೇಕ ತಾಂತ್ರಿಕ ವೈಶಿಷ್ಟ್ಯತೆಗಳನ್ನು ಈ ಎಲ್‌ಸಿಎ ತೇಜಸ್‌ ಯುದ್ಧ ವಿಮಾನಗಳು ಹೊಂದಿವೆ.

lokesh

Recent Posts

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

3 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

3 hours ago

ಓದುಗರ ಪತ್ರ: 39 ಅಗತ್ಯ ಔಷಧಗಳ ಬೆಲೆ ಇಳಿಕೆ ಸ್ವಾಗತಾರ್ಹ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…

3 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ರಮಣ್ ಕಿಶೋರ್ ಎಂಬ ‘ಗಾಂವ್ ಕಾ ಡಾಕ್ಟರ್’

ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…

3 hours ago

ದೇವಸ್ಥಾನಗಳ ಅಭಿವೃದ್ಧಿಗೆ ಧಾರ್ಮಿಕ ಪ್ರವಾಸೋದ್ಯಮ ವರದಾನ

ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…

3 hours ago

ಮಂಡ್ಯ ಜಿಲ್ಲೆಯ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…

3 hours ago