ಮುಂಬಾಯಿ : ನಟಿ ನಯನತಾರಾ ಅಭಿನಯದ ʼಅನ್ನಪೂರ್ಣಿʼ ಸಿನಿಮಾ ಇತ್ತೀಚೆಗೆ ತೆರೆಕಂಡು, ಇದೀಗ ಓಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ. ಈ ನಡುವೆ ಸಿನಿಮಾದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದೆ.
ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ನಯನತಾರಾ ಅವರ ಇತ್ತೀಚಿನ ಚಿತ್ರ ʼಅನ್ನಪೂರ್ಣಿʼ ಸಿನಿಮಾದ ನಿರ್ಮಾಪಕರ ವಿರುದ್ಧ ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಪೊಲೀಸ್ ದೂರು ದಾಖಲಿಸಿದ್ದಾರೆ.
ನಿರ್ಮಾಪಕರು ರಾಮನನ್ನು ಅವಮಾನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.ಈ ಬಗ್ಗೆ ಶನಿವಾರ ಟ್ವೀಟ್ ಮಾಡಿ, ʼಅನ್ನಪೂರ್ಣಿʼ ಸಿನಿಮಾವನ್ನು ಹಿಂದೂ ವಿರೋಧಿ,ಸಿನಿಮಾ ಲವ್ ಜಿಹಾದ್ ನ್ನು ಉತ್ತೇಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
“ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ಜಗತ್ತು ಸಂಭ್ರಮಿಸುತ್ತಿರುವ ಈ ಸಮಯದಲ್ಲಿ, ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಚಲನಚಿತ್ರ ʼಅನ್ನಪೂರ್ಣಿʼ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿದೆ.
ಈ ಸಿನಿಮಾದಲ್ಲಿ ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡುವ ವೇಳೆ ನಮಾಜ್ ಮಾಡುತ್ತಾಳೆ.ಈ ಚಿತ್ರದಲ್ಲಿ ಲವ್ ಜಿಹಾದ್ ನ್ನು ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸ ತಿನ್ನುವವರಾಗಿದ್ದರು ಎಂದು ಹೇಳಿ ಮಾಂಸ ತಿನ್ನಲು ನಟಿಯನ್ನು ಮನವೊಲಿಸುವ ದೃಶ್ಯಗಳಿವೆ’ ಎಂದು ಸೋಲಂಕಿ ಬರೆದಿದ್ದಾರೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…