BREAKING NEWS

ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ : ʼಅನ್ನಪೂರ್ಣಿʼ ಸಿನಿಮಾ ತಂಡದ ವಿರುದ್ಧ ದೂರು ದಾಖಲು!

ಮುಂಬಾಯಿ :  ನಟಿ ನಯನತಾರಾ ಅಭಿನಯದ ʼಅನ್ನಪೂರ್ಣಿʼ ಸಿನಿಮಾ ಇತ್ತೀಚೆಗೆ ತೆರೆಕಂಡು, ಇದೀಗ ಓಟಿಟಿಯಲ್ಲಿ ಸ್ಟ್ರೀಮ್‌ ಆಗುತ್ತಿದೆ. ಈ ನಡುವೆ ಸಿನಿಮಾದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದೆ.

ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ನಯನತಾರಾ ಅವರ ಇತ್ತೀಚಿನ ಚಿತ್ರ ʼಅನ್ನಪೂರ್ಣಿʼ ಸಿನಿಮಾದ ನಿರ್ಮಾಪಕರ ವಿರುದ್ಧ ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಪೊಲೀಸ್ ದೂರು ದಾಖಲಿಸಿದ್ದಾರೆ.

ನಿರ್ಮಾಪಕರು ರಾಮನನ್ನು ಅವಮಾನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.ಈ ಬಗ್ಗೆ ಶನಿವಾರ ಟ್ವೀಟ್‌ ಮಾಡಿ, ʼಅನ್ನಪೂರ್ಣಿʼ ಸಿನಿಮಾವನ್ನು ಹಿಂದೂ ವಿರೋಧಿ,ಸಿನಿಮಾ ಲವ್‌ ಜಿಹಾದ್‌ ನ್ನು ಉತ್ತೇಸುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ.

“ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ಜಗತ್ತು ಸಂಭ್ರಮಿಸುತ್ತಿರುವ ಈ ಸಮಯದಲ್ಲಿ, ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಚಲನಚಿತ್ರ ʼಅನ್ನಪೂರ್ಣಿʼ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

ಈ ಸಿನಿಮಾದಲ್ಲಿ ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡುವ ವೇಳೆ ನಮಾಜ್ ಮಾಡುತ್ತಾಳೆ.ಈ ಚಿತ್ರದಲ್ಲಿ ಲವ್ ಜಿಹಾದ್ ನ್ನು ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸ ತಿನ್ನುವವರಾಗಿದ್ದರು ಎಂದು ಹೇಳಿ ಮಾಂಸ ತಿನ್ನಲು ನಟಿಯನ್ನು ಮನವೊಲಿಸುವ ದೃಶ್ಯಗಳಿವೆ’ ಎಂದು ಸೋಲಂಕಿ ಬರೆದಿದ್ದಾರೆ.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸದ್ದು ಮಾಡುತ್ತಿರುವ ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವ

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…

10 mins ago

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦…

3 hours ago

ಮುಡಾ ಅಕ್ರಮ : ತೆರೆಗೆ ಸರಿದ ದೇಸಾಯಿ ಆಯೋಗದ ವರದಿ

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…

3 hours ago

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

15 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

15 hours ago