ಮುಂಬಾಯಿ : ನಟಿ ನಯನತಾರಾ ಅಭಿನಯದ ʼಅನ್ನಪೂರ್ಣಿʼ ಸಿನಿಮಾ ಇತ್ತೀಚೆಗೆ ತೆರೆಕಂಡು, ಇದೀಗ ಓಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ. ಈ ನಡುವೆ ಸಿನಿಮಾದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದೆ.
ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ನಯನತಾರಾ ಅವರ ಇತ್ತೀಚಿನ ಚಿತ್ರ ʼಅನ್ನಪೂರ್ಣಿʼ ಸಿನಿಮಾದ ನಿರ್ಮಾಪಕರ ವಿರುದ್ಧ ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಪೊಲೀಸ್ ದೂರು ದಾಖಲಿಸಿದ್ದಾರೆ.
ನಿರ್ಮಾಪಕರು ರಾಮನನ್ನು ಅವಮಾನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.ಈ ಬಗ್ಗೆ ಶನಿವಾರ ಟ್ವೀಟ್ ಮಾಡಿ, ʼಅನ್ನಪೂರ್ಣಿʼ ಸಿನಿಮಾವನ್ನು ಹಿಂದೂ ವಿರೋಧಿ,ಸಿನಿಮಾ ಲವ್ ಜಿಹಾದ್ ನ್ನು ಉತ್ತೇಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
“ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ಜಗತ್ತು ಸಂಭ್ರಮಿಸುತ್ತಿರುವ ಈ ಸಮಯದಲ್ಲಿ, ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಚಲನಚಿತ್ರ ʼಅನ್ನಪೂರ್ಣಿʼ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿದೆ.
ಈ ಸಿನಿಮಾದಲ್ಲಿ ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡುವ ವೇಳೆ ನಮಾಜ್ ಮಾಡುತ್ತಾಳೆ.ಈ ಚಿತ್ರದಲ್ಲಿ ಲವ್ ಜಿಹಾದ್ ನ್ನು ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸ ತಿನ್ನುವವರಾಗಿದ್ದರು ಎಂದು ಹೇಳಿ ಮಾಂಸ ತಿನ್ನಲು ನಟಿಯನ್ನು ಮನವೊಲಿಸುವ ದೃಶ್ಯಗಳಿವೆ’ ಎಂದು ಸೋಲಂಕಿ ಬರೆದಿದ್ದಾರೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…