ಮುಂಬಾಯಿ : ನಟಿ ನಯನತಾರಾ ಅಭಿನಯದ ʼಅನ್ನಪೂರ್ಣಿʼ ಸಿನಿಮಾ ಇತ್ತೀಚೆಗೆ ತೆರೆಕಂಡು, ಇದೀಗ ಓಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ. ಈ ನಡುವೆ ಸಿನಿಮಾದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದೆ.
ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ನಯನತಾರಾ ಅವರ ಇತ್ತೀಚಿನ ಚಿತ್ರ ʼಅನ್ನಪೂರ್ಣಿʼ ಸಿನಿಮಾದ ನಿರ್ಮಾಪಕರ ವಿರುದ್ಧ ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಪೊಲೀಸ್ ದೂರು ದಾಖಲಿಸಿದ್ದಾರೆ.
ನಿರ್ಮಾಪಕರು ರಾಮನನ್ನು ಅವಮಾನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.ಈ ಬಗ್ಗೆ ಶನಿವಾರ ಟ್ವೀಟ್ ಮಾಡಿ, ʼಅನ್ನಪೂರ್ಣಿʼ ಸಿನಿಮಾವನ್ನು ಹಿಂದೂ ವಿರೋಧಿ,ಸಿನಿಮಾ ಲವ್ ಜಿಹಾದ್ ನ್ನು ಉತ್ತೇಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
“ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ಜಗತ್ತು ಸಂಭ್ರಮಿಸುತ್ತಿರುವ ಈ ಸಮಯದಲ್ಲಿ, ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಚಲನಚಿತ್ರ ʼಅನ್ನಪೂರ್ಣಿʼ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿದೆ.
ಈ ಸಿನಿಮಾದಲ್ಲಿ ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡುವ ವೇಳೆ ನಮಾಜ್ ಮಾಡುತ್ತಾಳೆ.ಈ ಚಿತ್ರದಲ್ಲಿ ಲವ್ ಜಿಹಾದ್ ನ್ನು ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸ ತಿನ್ನುವವರಾಗಿದ್ದರು ಎಂದು ಹೇಳಿ ಮಾಂಸ ತಿನ್ನಲು ನಟಿಯನ್ನು ಮನವೊಲಿಸುವ ದೃಶ್ಯಗಳಿವೆ’ ಎಂದು ಸೋಲಂಕಿ ಬರೆದಿದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…