ಬೆಂಗಳೂರು: ಭ್ರಷ್ಟಾಚಾರ ಮುಕ್ತ ಸರ್ಕಾರ ಕೊಡುತ್ತೇವೆ. ನಿಮ್ಮ ಪ್ರೀತಿ ವಿಶ್ವಾಸ ಮರೆಯಲ್ಲ. ಇದು ಜನತೆಯೆ ಸರ್ಕಾರ. ಹೃದಯದಿಂದ ಕೆಲಸ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಕಂಠೀರವ ಮೈದಾನದಲ್ಲಿ ನಡೆದ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನೂತನ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಂಚ ಆಶ್ವಾಸನೆಗಳು ಕಾನೂನು ರೂಪ ಪಡೆಯಲಿದೆ. ನಾವು ನುಡಿದಂತೆ ನಡೆಯುತ್ತೇವೆ ಎಂದರು.
ಕಾಂಗ್ರೆಸ್ಸಿನ ವಿಜಯದ ನಂತರ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆದ್ದಿತು ಎಂದು ಅನೇಕ ವಿಷಯಗಳನ್ನು ಬರೆಯಲಾಗಿದೆ, ವಿಭಿನ್ನ ವಿಶ್ಲೇಷಣೆಗಳನ್ನು ಮಾಡಲಾಗಿದೆ ಆದರೆ ನಾವು ಬಡವರು, ದಲಿತರು ಮತ್ತು ಆದಿವಾಸಿಗಳು ಹಿಂದುಳಿದವರ ಜೊತೆ ನಿಂತಿದ್ದರಿಂದ ಕಾಂಗ್ರೆಸ್ ಗೆದ್ದಿದೆ ಎಂದು ನಾನು ಹೇಳಲು ಬಯಸುತ್ತೇನೆ. ನಾವು ಸತ್ಯವನ್ನು ಹೊಂದಿದ್ದೇವೆ, ಬಡವರು. ಬಿಜೆಪಿ ಬಳಿ ಹಣ, ಪೋಲೀಸ್ ಎಲ್ಲವೂ ಇತ್ತು ಆದರೆ ಕರ್ನಾಟಕದ ಜನರು ತಮ್ಮ ಎಲ್ಲಾ ಶಕ್ತಿಯನ್ನು ಸೋಲಿಸಿದ್ದಾರೆ ಎಂದರು.





