BREAKING NEWS

ಅಧಿಕಾರಕ್ಕೆ ಬಂದ ಕೂಡಲೇ ಡಿಕೆ ಸಹೋದರರಿಂದ ದ್ವೇಷ ರಾಜಕಾರಣ : ಬಿಜೆಪಿ ಶಾಸಕ ಮುನಿರತ್ನ ಆರೋಪ

ಬೆಂಗಳೂರು : ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಅಡಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ನಡೆಸದೆ 250 ಕೋಟಿ ರೂ. ಮೊತ್ತದ ಬಿಲ್​ ಪಾವತಿ ಮಾಡಿದ ಆರೋಪದ ಮೇಲೆ ಆರ್​ಆರ್​ ನಗರ ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿವಿಸಿಸಿ ವಿಭಾಗದ ಮುಖ್ಯ ಇಂಜಿನಿಯರ್ ಸೇರಿದಂತೆ 11 ಮಂದಿಯನ್ನು ಅಮಾನತು ಮಾಡಲಾಗಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಮುನಿರತ್ನ ಆಡಳಿತಾರೂಢ ಕಾಂಗ್ರೆಸ್, ವಿಶೇಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ನನ್ನ ವಿರುದ್ಧ ರಾಜಕೀಯ ದ್ವೇಷ ಸಾಧಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ಕಾಂಗ್ರೆಸ್ ನಾಯಕರ ಸೇಡಿನ ರಾಜಕಾರಣವಲ್ಲದೆ ಬೇರೇನೂ ಅಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ಬಿಬಿಎಂಪಿ ಅಧಿಕಾರಿಗಳ ಅಮಾನತು ಹಾಗೂ ನನ್ನ ಹೆಸರನ್ನು ವಿವಾದಕ್ಕೆ ಎಳೆದು ತರುತ್ತಿರುವುದು ಆರಂಭವಷ್ಟೇ, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ದ್ವೇಷದ ರಾಜಕೀಯ ನಡೆಯಲಿದೆ ಎಂದಿದ್ದಾರೆ.ರಾಜ್ಯಪಾಲರಿಗೆ ದೂರು ಸಲ್ಲಿಸುವ ಅಥವಾ ಬಿಜೆಪಿ ಹೈಕಮಾಂಡ್‌ಗೆ ವಿಷಯ ಪ್ರಸ್ತಾಪಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುನಿರತ್ನ ಮುಂದಿನ ಬೆಳವಣಿಗೆಯನ್ನು ಕಾದು ನೋಡುತ್ತೇನೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಆರ್ ಆರ್ ನಗರದಲ್ಲಿ ಡಿಕೆಶಿ ಸಹೋದರರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಜಾಲಹಳ್ಳಿ ಮಾಜಿ ಕಾರ್ಪೊರೇಟರ್ ಹಾಗೂ ಮುನಿರತ್ನ ಅವರ ಆಪ್ತ ಜಿ ಕೆ ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಶಾಸಕರನ್ನು ಸೋಲಿಸಿ ಕಾಂಗ್ರೆಸ್-ಜೆಡಿಎಸ್ ಆಡಳಿತವನ್ನು ಕೊನೆಗೊಳಿಸಿದ್ದರಿಂದ ಅವರು ಕೋಪಗೊಂಡಿದ್ದಾರೆ, ನನಗೆ ಜೀವ ಬೆದರಿಕೆ ಇರುವುದರಿಂದ ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಚೇರಿಗೆ ಪತ್ರ ಕಳುಹಿಸುತ್ತೇನೆ” ಎಂದು ಅವರು ಹೇಳಿದರು.

lokesh

Recent Posts

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

17 mins ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

26 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

39 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

1 hour ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

1 hour ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

2 hours ago