BREAKING NEWS

ಅಧಿಕಾರಕ್ಕೆ ಬಂದ ಕೂಡಲೇ ಡಿಕೆ ಸಹೋದರರಿಂದ ದ್ವೇಷ ರಾಜಕಾರಣ : ಬಿಜೆಪಿ ಶಾಸಕ ಮುನಿರತ್ನ ಆರೋಪ

ಬೆಂಗಳೂರು : ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಅಡಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ನಡೆಸದೆ 250 ಕೋಟಿ ರೂ. ಮೊತ್ತದ ಬಿಲ್​ ಪಾವತಿ ಮಾಡಿದ ಆರೋಪದ ಮೇಲೆ ಆರ್​ಆರ್​ ನಗರ ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿವಿಸಿಸಿ ವಿಭಾಗದ ಮುಖ್ಯ ಇಂಜಿನಿಯರ್ ಸೇರಿದಂತೆ 11 ಮಂದಿಯನ್ನು ಅಮಾನತು ಮಾಡಲಾಗಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಮುನಿರತ್ನ ಆಡಳಿತಾರೂಢ ಕಾಂಗ್ರೆಸ್, ವಿಶೇಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ನನ್ನ ವಿರುದ್ಧ ರಾಜಕೀಯ ದ್ವೇಷ ಸಾಧಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ಕಾಂಗ್ರೆಸ್ ನಾಯಕರ ಸೇಡಿನ ರಾಜಕಾರಣವಲ್ಲದೆ ಬೇರೇನೂ ಅಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ಬಿಬಿಎಂಪಿ ಅಧಿಕಾರಿಗಳ ಅಮಾನತು ಹಾಗೂ ನನ್ನ ಹೆಸರನ್ನು ವಿವಾದಕ್ಕೆ ಎಳೆದು ತರುತ್ತಿರುವುದು ಆರಂಭವಷ್ಟೇ, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ದ್ವೇಷದ ರಾಜಕೀಯ ನಡೆಯಲಿದೆ ಎಂದಿದ್ದಾರೆ.ರಾಜ್ಯಪಾಲರಿಗೆ ದೂರು ಸಲ್ಲಿಸುವ ಅಥವಾ ಬಿಜೆಪಿ ಹೈಕಮಾಂಡ್‌ಗೆ ವಿಷಯ ಪ್ರಸ್ತಾಪಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುನಿರತ್ನ ಮುಂದಿನ ಬೆಳವಣಿಗೆಯನ್ನು ಕಾದು ನೋಡುತ್ತೇನೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಆರ್ ಆರ್ ನಗರದಲ್ಲಿ ಡಿಕೆಶಿ ಸಹೋದರರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಜಾಲಹಳ್ಳಿ ಮಾಜಿ ಕಾರ್ಪೊರೇಟರ್ ಹಾಗೂ ಮುನಿರತ್ನ ಅವರ ಆಪ್ತ ಜಿ ಕೆ ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಶಾಸಕರನ್ನು ಸೋಲಿಸಿ ಕಾಂಗ್ರೆಸ್-ಜೆಡಿಎಸ್ ಆಡಳಿತವನ್ನು ಕೊನೆಗೊಳಿಸಿದ್ದರಿಂದ ಅವರು ಕೋಪಗೊಂಡಿದ್ದಾರೆ, ನನಗೆ ಜೀವ ಬೆದರಿಕೆ ಇರುವುದರಿಂದ ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಚೇರಿಗೆ ಪತ್ರ ಕಳುಹಿಸುತ್ತೇನೆ” ಎಂದು ಅವರು ಹೇಳಿದರು.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

5 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

5 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

5 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

5 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

5 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

5 hours ago