BREAKING NEWS

ಹಾವೇರಿ: 1.52 ಕೋಟಿ ಮೌಲ್ಯದ ಸಾಮಗ್ರಿ ವಶ

ಹಾವೇರಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮವಾಗಿ ಮತ್ತು ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ 1.52 ಕೋಟಿ ಮೌಲ್ಯದ ಸಾಮಗ್ರಿ ಮತ್ತು ನಗದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನಮೂರ್ತಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ ತಿಳಿಸಿದರು.

ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಾದರಿ ನೀತಿ ಸಂಹಿತೆ ಜಾರಿ ಪೂರ್ವದಲ್ಲಿ (ಮಾರ್ಚ್ 15ರಿಂದ 29ರವರೆಗೆ) ನಗದು ಹಾಗೂ ವಸ್ತು ಸೇರಿದಂತೆ 61.74 ಲಕ್ಷ ಮೊತ್ತದ ಸಾಮಗ್ರಿ ಹಾಗೂ ನೀತಿ ಸಂಹಿತೆ ಜಾರಿಗೊಂಡ ನಂತರ (ಮಾರ್ಚ್ 29ರಿಂದ ಏಪ್ರಿಲ್ 14ರವರೆಗೆ) 90.87 ಲಕ್ಷ ಮೊತ್ತದ ಸಾಮಗ್ರಿ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಅಬಕಾರಿ ಇಲಾಖೆಯಿಂದ ನೀತಿ ಸಂಹಿತೆ ಪೂರ್ವದಲ್ಲಿ ₹2.32 ಲಕ್ಷ ಮೊತ್ತದ 573 ಲೀಟರ್ ಹಾಗೂ ಚುನಾವಣೆ ನೀತಿ ಸಂಹಿತೆ ಜಾರಿ ನಂತರ 14,33,297 ಮೊತ್ತದ 3,258 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಒಟ್ಟು 335 ಅಬಕಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿವೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧಿಸಿದ 16 ಪ್ರಕರಣಗಳು ದಾಖಲಾಗಿವೆ ಎಂದು ವಿವರಿಸಿದರು.

56 ವಾಹನಗಳ ಜಪ್ತಿ: ನೀತೆ ಸಂಹಿತೆ ಪೂರ್ವದಲ್ಲಿ 4,400 ಮೊತ್ತದ ಮಾದಕ ವಸ್ತುಗಳು, 28.05 ಲಕ್ಷ ಮೊತ್ತದ ಬಳಕೆ ವಸ್ತುಗಳು, 4.94 ಲಕ್ಷ ಮೊತ್ತದ ಅತ್ಯಮೂಲ್ಯ ವಸ್ತುಗಳು, 21.50 ಲಕ್ಷ ಮೊತ್ತದ 22 ವಿವಿಧ ನಮೂನೆ ವಾಹನಗಳು ಹಾಗೂ ನೀತಿ ಸಂಹಿತೆ ಜಾರಿ ನಂತರ 7.54 ಲಕ್ಷ ಮೊತ್ತದ ವಸ್ತುಗಳು, 22.31 ಲಕ್ಷ ಮೌಲ್ಯದ 34 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಒಟ್ಟಾರೆ ಈವರೆಗೆ 56 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಾಮಾಜಿಕ ಜಾಲತಾಣಗಳ ಮೇಲೆ ಮೊಕದ್ದಮೆ: ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಾನಗಲ್ ಮತ್ತು ಹಿರೇಕೆರೂರಿನಲ್ಲಿ ಎರಡು ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ಮಾದರಿ ನೀತಿ ಸಂಹಿತೆ ಹಾಗೂ ಸಾಮಾಜಿಕ ಜಾಲತಾಣಗಳ ಚುನಾವಣಾ ನೋಡಲ್ ಅಧಿಕಾರಿ ಅಕ್ಷಯ ಶ್ರೀಧರ ಹೇಳಿದರು.

ಹಿರೇಕೆರೂರಿನ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಮೇಲೆ ಐಪಿಸಿ 505 ರಡಿ ಹಾಗೂ ಹಾನಗಲ್ ಕ್ಷೇತ್ರದ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಮೇಲೆ 171 ಜಿ ಅಡಿ ಮೊಕದ್ದಮೆ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಜಾಹೀರಾತಿಗೆ ಪೂರ್ವಾನುಮತಿ ಅಗತ್ಯವಾಗಿದೆ. ಚುನಾವಣಾ ಜಾಹೀರಾತು, ವಿಡಿಯೊಗಳ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದು ತಿಳಿಸಿದರು.

andolanait

Recent Posts

ಮೈಸೂರು: ಲೋಕಾಯುಕ್ತ ಪೊಲೀಸರಿಂದ ಏಳು ಕಡೆ ದಾಳಿ: ದಾಖಲೆಗಳ ಪರಿಶೀಲನೆ

ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…

9 mins ago

ಸರಗೂರು| ಕಾಡಾನೆ ದಾಳಿ: ದೇವಸ್ಥಾನದ ಕಾವಲುಗಾರ ಸಾವು

ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…

1 hour ago

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

4 hours ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

4 hours ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

4 hours ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

4 hours ago