ಹಾವೇರಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮವಾಗಿ ಮತ್ತು ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ 1.52 ಕೋಟಿ ಮೌಲ್ಯದ ಸಾಮಗ್ರಿ ಮತ್ತು ನಗದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನಮೂರ್ತಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ ತಿಳಿಸಿದರು.
ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಾದರಿ ನೀತಿ ಸಂಹಿತೆ ಜಾರಿ ಪೂರ್ವದಲ್ಲಿ (ಮಾರ್ಚ್ 15ರಿಂದ 29ರವರೆಗೆ) ನಗದು ಹಾಗೂ ವಸ್ತು ಸೇರಿದಂತೆ 61.74 ಲಕ್ಷ ಮೊತ್ತದ ಸಾಮಗ್ರಿ ಹಾಗೂ ನೀತಿ ಸಂಹಿತೆ ಜಾರಿಗೊಂಡ ನಂತರ (ಮಾರ್ಚ್ 29ರಿಂದ ಏಪ್ರಿಲ್ 14ರವರೆಗೆ) 90.87 ಲಕ್ಷ ಮೊತ್ತದ ಸಾಮಗ್ರಿ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಅಬಕಾರಿ ಇಲಾಖೆಯಿಂದ ನೀತಿ ಸಂಹಿತೆ ಪೂರ್ವದಲ್ಲಿ ₹2.32 ಲಕ್ಷ ಮೊತ್ತದ 573 ಲೀಟರ್ ಹಾಗೂ ಚುನಾವಣೆ ನೀತಿ ಸಂಹಿತೆ ಜಾರಿ ನಂತರ 14,33,297 ಮೊತ್ತದ 3,258 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಒಟ್ಟು 335 ಅಬಕಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿವೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧಿಸಿದ 16 ಪ್ರಕರಣಗಳು ದಾಖಲಾಗಿವೆ ಎಂದು ವಿವರಿಸಿದರು.
56 ವಾಹನಗಳ ಜಪ್ತಿ: ನೀತೆ ಸಂಹಿತೆ ಪೂರ್ವದಲ್ಲಿ 4,400 ಮೊತ್ತದ ಮಾದಕ ವಸ್ತುಗಳು, 28.05 ಲಕ್ಷ ಮೊತ್ತದ ಬಳಕೆ ವಸ್ತುಗಳು, 4.94 ಲಕ್ಷ ಮೊತ್ತದ ಅತ್ಯಮೂಲ್ಯ ವಸ್ತುಗಳು, 21.50 ಲಕ್ಷ ಮೊತ್ತದ 22 ವಿವಿಧ ನಮೂನೆ ವಾಹನಗಳು ಹಾಗೂ ನೀತಿ ಸಂಹಿತೆ ಜಾರಿ ನಂತರ 7.54 ಲಕ್ಷ ಮೊತ್ತದ ವಸ್ತುಗಳು, 22.31 ಲಕ್ಷ ಮೌಲ್ಯದ 34 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಒಟ್ಟಾರೆ ಈವರೆಗೆ 56 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಾಮಾಜಿಕ ಜಾಲತಾಣಗಳ ಮೇಲೆ ಮೊಕದ್ದಮೆ: ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಾನಗಲ್ ಮತ್ತು ಹಿರೇಕೆರೂರಿನಲ್ಲಿ ಎರಡು ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ಮಾದರಿ ನೀತಿ ಸಂಹಿತೆ ಹಾಗೂ ಸಾಮಾಜಿಕ ಜಾಲತಾಣಗಳ ಚುನಾವಣಾ ನೋಡಲ್ ಅಧಿಕಾರಿ ಅಕ್ಷಯ ಶ್ರೀಧರ ಹೇಳಿದರು.
ಹಿರೇಕೆರೂರಿನ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಮೇಲೆ ಐಪಿಸಿ 505 ರಡಿ ಹಾಗೂ ಹಾನಗಲ್ ಕ್ಷೇತ್ರದ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಮೇಲೆ 171 ಜಿ ಅಡಿ ಮೊಕದ್ದಮೆ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಜಾಹೀರಾತಿಗೆ ಪೂರ್ವಾನುಮತಿ ಅಗತ್ಯವಾಗಿದೆ. ಚುನಾವಣಾ ಜಾಹೀರಾತು, ವಿಡಿಯೊಗಳ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…