ಹಾವೇರಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮವಾಗಿ ಮತ್ತು ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ 1.52 ಕೋಟಿ ಮೌಲ್ಯದ ಸಾಮಗ್ರಿ ಮತ್ತು ನಗದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನಮೂರ್ತಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ ತಿಳಿಸಿದರು.
ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಾದರಿ ನೀತಿ ಸಂಹಿತೆ ಜಾರಿ ಪೂರ್ವದಲ್ಲಿ (ಮಾರ್ಚ್ 15ರಿಂದ 29ರವರೆಗೆ) ನಗದು ಹಾಗೂ ವಸ್ತು ಸೇರಿದಂತೆ 61.74 ಲಕ್ಷ ಮೊತ್ತದ ಸಾಮಗ್ರಿ ಹಾಗೂ ನೀತಿ ಸಂಹಿತೆ ಜಾರಿಗೊಂಡ ನಂತರ (ಮಾರ್ಚ್ 29ರಿಂದ ಏಪ್ರಿಲ್ 14ರವರೆಗೆ) 90.87 ಲಕ್ಷ ಮೊತ್ತದ ಸಾಮಗ್ರಿ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಅಬಕಾರಿ ಇಲಾಖೆಯಿಂದ ನೀತಿ ಸಂಹಿತೆ ಪೂರ್ವದಲ್ಲಿ ₹2.32 ಲಕ್ಷ ಮೊತ್ತದ 573 ಲೀಟರ್ ಹಾಗೂ ಚುನಾವಣೆ ನೀತಿ ಸಂಹಿತೆ ಜಾರಿ ನಂತರ 14,33,297 ಮೊತ್ತದ 3,258 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಒಟ್ಟು 335 ಅಬಕಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿವೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧಿಸಿದ 16 ಪ್ರಕರಣಗಳು ದಾಖಲಾಗಿವೆ ಎಂದು ವಿವರಿಸಿದರು.
56 ವಾಹನಗಳ ಜಪ್ತಿ: ನೀತೆ ಸಂಹಿತೆ ಪೂರ್ವದಲ್ಲಿ 4,400 ಮೊತ್ತದ ಮಾದಕ ವಸ್ತುಗಳು, 28.05 ಲಕ್ಷ ಮೊತ್ತದ ಬಳಕೆ ವಸ್ತುಗಳು, 4.94 ಲಕ್ಷ ಮೊತ್ತದ ಅತ್ಯಮೂಲ್ಯ ವಸ್ತುಗಳು, 21.50 ಲಕ್ಷ ಮೊತ್ತದ 22 ವಿವಿಧ ನಮೂನೆ ವಾಹನಗಳು ಹಾಗೂ ನೀತಿ ಸಂಹಿತೆ ಜಾರಿ ನಂತರ 7.54 ಲಕ್ಷ ಮೊತ್ತದ ವಸ್ತುಗಳು, 22.31 ಲಕ್ಷ ಮೌಲ್ಯದ 34 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಒಟ್ಟಾರೆ ಈವರೆಗೆ 56 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಾಮಾಜಿಕ ಜಾಲತಾಣಗಳ ಮೇಲೆ ಮೊಕದ್ದಮೆ: ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಾನಗಲ್ ಮತ್ತು ಹಿರೇಕೆರೂರಿನಲ್ಲಿ ಎರಡು ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ಮಾದರಿ ನೀತಿ ಸಂಹಿತೆ ಹಾಗೂ ಸಾಮಾಜಿಕ ಜಾಲತಾಣಗಳ ಚುನಾವಣಾ ನೋಡಲ್ ಅಧಿಕಾರಿ ಅಕ್ಷಯ ಶ್ರೀಧರ ಹೇಳಿದರು.
ಹಿರೇಕೆರೂರಿನ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಮೇಲೆ ಐಪಿಸಿ 505 ರಡಿ ಹಾಗೂ ಹಾನಗಲ್ ಕ್ಷೇತ್ರದ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಮೇಲೆ 171 ಜಿ ಅಡಿ ಮೊಕದ್ದಮೆ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಜಾಹೀರಾತಿಗೆ ಪೂರ್ವಾನುಮತಿ ಅಗತ್ಯವಾಗಿದೆ. ಚುನಾವಣಾ ಜಾಹೀರಾತು, ವಿಡಿಯೊಗಳ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದು ತಿಳಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…