ಬೆಂಗಳೂರು : ದೀಪಾವಳಿ ಹಬ್ಬದ ದಿನ ತಮ್ಮ ಮನೆಗೆ ದೀಪಾಲಂಕಾರ ಮಾಡಲು ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದು ಬಳಸಿಕೊಂಡ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು ಬೆಸ್ಕಾಂಗೆ ವಿದ್ಯುತ್ ದಂಡ ಪಾವತಿಸಿರುವ ಬಗ್ಗೆ ವರದಿಯಾಗಿದೆ.
ಬೆಸ್ಕಾಂ ಅಧಿಕಾರಿಗಳು ಎಚ್ಡಿಕೆ ಮನೆಯಲ್ಲಿ ಪರಿಶೀಲಿಸಿ 7 ದಿನಗಳ ಒಳಗೆ ದಂಡ ಪಾವತಿಸುವಂತೆ ಸೂಚಿಸಿದ್ದರು. ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ವಿದ್ಯುತ್ ಕಾಯ್ದೆಯಡಿ ಎಫ್ಐಆರ್ ದಾಖಲಾಗಿತ್ತು. ವೈರಲ್ ಆಗಿರುವ ವಿಡಿಯೋ ಕ್ಲಿಪ್ ಆಧರಿಸಿ ದೂರು ದಾಖಲಿಸಲಾಗಿದೆ ಎಂದು ಇಂಧನ ಇಲಾಖೆಯ ಹೇಳಿಕೆ ತಿಳಿಸಿತ್ತು.
ಎಚ್ಡಿ ಕುಮಾರಸ್ವಾಮಿ ಬೆಸ್ಕಾಂಗೆ ರೂ 68,526 ದಂಡದ ಮೊತ್ತವನ್ನು ಪಾವತಿಸಿದ್ದಾರೆ ಎನ್ನಲಾಗಿದೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…