ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರು ಗೆಲುವಿನ ನಗೆ ಬೀರಿದ್ದಾರೆ. ಬರೋಬ್ಬರಿ 2,84,620 ಮತಗಳಿಂದ ಗೆಲುವಿನ ದಾಖಲೆ ಬರೆದಿದ್ದಾರೆ.
ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿ ತಮ್ಮ ಗೆಲುವಿನ ಖುಷಿ ಹಂಚಿಕೊಂಡಿದ್ದು, ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ ಶಿರ ಸಾಷ್ಟಾಂಗ ನಮನಗಳನ್ನು ತಿಳಿಸಿದ್ದಾರೆ.
ಈ ಗೆಲುವು ಸಕ್ಕರೆ ನಾಡಿನ ನನ್ನೆಲ್ಲಾ ತಂದೆ ತಾಯಂದಿರು, ಅಕ್ಕ ತಂಗಿಯರು, ಅಣ್ಣ ತಮ್ಮಂದಿರು ಹಾಗೂ ಜೆಡಿಎಸ್ – ಬಿಜೆಪಿ ಕಾರ್ಯಕರ್ತರು ಸೇರಿ ಸಮಸ್ತರಿಗೂ ಸಮರ್ಪಿತ. ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನ್ನನ್ನು ಇಷ್ಟೊಂದು ಭಾರೀ ಅಂತರದಿಂದ ಗೆಲ್ಲಿಸಿದ ಎರಡೂ ಪಕ್ಷಗಳ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಈ ಯಶಸ್ಸು ಸಲ್ಲುತ್ತದೆ. ಸಂಘಟಿತ ಹೋರಾಟದಿಂದ ಈ ವಿಜಯ ಸಾಧ್ಯವಾಗಿದೆ ಎಂದು ವಿನಮ್ರವಾಗಿ ಹೇಳಬಯಸುತ್ತೇನೆ.
ಪ್ರತಿಯೊಬ್ಬರಿಗೂ ನನ್ನ ಕೃತಜ್ಞತಾಪೂರ್ವಕ ಧನ್ಯವಾದಗಳು. ಮಂಡ್ಯ ಲೋಕಸಭೆ ಕ್ಷೇತ್ರದ ಸೇವೆಗೆ ನನ್ನ ಜೀವನ ಮುಡಿಪು ಎಂದು ಬರೆದುಕೊಂಡಿದ್ದಾರೆ.
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…