BREAKING NEWS

ಎಚ್‌ಡಿಕೆಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ. 28ರ ರಾತ್ರಿಯಿಂದಲೇ ಅವರು ಕೊಂಚ ಸುಸ್ತಾಗಿದ್ದು, ನಿಧಾನವಾಗಿ ಚಳಿ ಜ್ವರ ಕಾಣಿಸಿಕೊಂಡಿತ್ತು. ಹಾಗಾಗಿ, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕುಮಾರಸ್ವಾಮಿಯವರು ಇತ್ತೀಚೆಗೆ ತೀವ್ರವಾಗಿ ಬಳಲಿದ್ದರು. ಚುನಾವಣೆಯಿಂದ ಇಲ್ಲಿಯವರೆಗೆ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಇಡೀ ಕರ್ನಾಟಕನ್ನು ಸುತ್ತಾಡಿ ಬಂದಿದ್ದರು. ಚುನಾವಣೆ ಮುಗಿದ ನಂತರ ಎರಡು ಬಾರಿ ಕುಟುಂಬದೊಂದಿಗೆ ವಿದೇಶ ಪ್ರವಾಸಕ್ಕೆ ಹೋಗಿದ್ದರು. ವಿದೇಶದಿಂದ ಬಂದಾದ ನಂತರ ಕಾರ್ಯಕರ್ತರ ಭೇಟಿ, ಪಕ್ಷ ಕಟ್ಟುವ ಕೆಲಸದಲ್ಲಿ ನಿರತರಾಗಿದ್ದರು. ಅವರಿಗೆ ಸೂಕ್ತವಾದ ವಿಶ್ರಾಂತಿ ಸಿಗದೇ ಇದ್ದಿದ್ದುದೇ ಅನಾರೋಗ್ಯಕ್ಕೆ ಕಾರಣ ಎನ್ನಲಾಗಿದೆ.

ಕೋಲಾರ ಕಾರ್ಯಕ್ರಮ ರದ್ದು : ಆರೋಗ್ಯ ಸರಿಯಿದ್ದಿದ್ದರೆ ಕುಮಾರಸ್ವಾಮಿಯವರು ಇಂದು ಕೋಲಾರಕ್ಕೆ ಭೇಟಿ ನೀಡಬೇಕಿತ್ತು. ಶ್ರೀನಿವಾಸಪುರಕ್ಕೆ ಭೇಟಿ ನೀಡಿ ಅಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಇತ್ತು. ಅರಣ್ಯ ಇಲಾಖೆಯ ಒತ್ತುವರಿಯಿಂದಾಗಿ ಬೆಳೆಗಳು ನಷ್ಟವಾಗಿದ್ದ ಹಿನ್ನೆಲೆಯಲ್ಲಿ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿ ಅಲ್ಲಿ ರೈತರೊಂದಿಗೆ ಸಮಾಲೋಚನೆ ನಡೆಸುವ ಕಾರ್ಯಕ್ರಮವಿತ್ತು.
ಅರಣ್ಯ ಇಲಾಖೆಯು ಇತ್ತೀಚೆಗೆ ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡಿರುವ ಜಮೀನುಗಳನ್ನು ತೆರವುಗೊಳಿಸಿದ್ದರು. ಆ ಸಂದರ್ಭದಲ್ಲಿ ಬೆಳೆ ನಾಶ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಆ ಹಿನ್ನೆಲೆಯಲ್ಲಿ ರೈತರ ಜೊತೆಗೆ ಮಾತುಕತೆ ನಡೆಸಲು ಕುಮಾರಸ್ವಾಮಿಯವರು ಶ್ರೀನಿವಾಸಪುರಕ್ಕೆ ಹೋಗುವ ಕಾರ್ಯಕ್ರಮವಿತ್ತು. ಈಗ ಆ ಕಾರ್ಯಕ್ರಮ ರದ್ದಾಗಿದೆ.

lokesh

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

5 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

5 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

6 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

6 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

7 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

8 hours ago