BREAKING NEWS

ಎಚ್‌ಡಿಕೆಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ. 28ರ ರಾತ್ರಿಯಿಂದಲೇ ಅವರು ಕೊಂಚ ಸುಸ್ತಾಗಿದ್ದು, ನಿಧಾನವಾಗಿ ಚಳಿ ಜ್ವರ ಕಾಣಿಸಿಕೊಂಡಿತ್ತು. ಹಾಗಾಗಿ, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕುಮಾರಸ್ವಾಮಿಯವರು ಇತ್ತೀಚೆಗೆ ತೀವ್ರವಾಗಿ ಬಳಲಿದ್ದರು. ಚುನಾವಣೆಯಿಂದ ಇಲ್ಲಿಯವರೆಗೆ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಇಡೀ ಕರ್ನಾಟಕನ್ನು ಸುತ್ತಾಡಿ ಬಂದಿದ್ದರು. ಚುನಾವಣೆ ಮುಗಿದ ನಂತರ ಎರಡು ಬಾರಿ ಕುಟುಂಬದೊಂದಿಗೆ ವಿದೇಶ ಪ್ರವಾಸಕ್ಕೆ ಹೋಗಿದ್ದರು. ವಿದೇಶದಿಂದ ಬಂದಾದ ನಂತರ ಕಾರ್ಯಕರ್ತರ ಭೇಟಿ, ಪಕ್ಷ ಕಟ್ಟುವ ಕೆಲಸದಲ್ಲಿ ನಿರತರಾಗಿದ್ದರು. ಅವರಿಗೆ ಸೂಕ್ತವಾದ ವಿಶ್ರಾಂತಿ ಸಿಗದೇ ಇದ್ದಿದ್ದುದೇ ಅನಾರೋಗ್ಯಕ್ಕೆ ಕಾರಣ ಎನ್ನಲಾಗಿದೆ.

ಕೋಲಾರ ಕಾರ್ಯಕ್ರಮ ರದ್ದು : ಆರೋಗ್ಯ ಸರಿಯಿದ್ದಿದ್ದರೆ ಕುಮಾರಸ್ವಾಮಿಯವರು ಇಂದು ಕೋಲಾರಕ್ಕೆ ಭೇಟಿ ನೀಡಬೇಕಿತ್ತು. ಶ್ರೀನಿವಾಸಪುರಕ್ಕೆ ಭೇಟಿ ನೀಡಿ ಅಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಇತ್ತು. ಅರಣ್ಯ ಇಲಾಖೆಯ ಒತ್ತುವರಿಯಿಂದಾಗಿ ಬೆಳೆಗಳು ನಷ್ಟವಾಗಿದ್ದ ಹಿನ್ನೆಲೆಯಲ್ಲಿ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿ ಅಲ್ಲಿ ರೈತರೊಂದಿಗೆ ಸಮಾಲೋಚನೆ ನಡೆಸುವ ಕಾರ್ಯಕ್ರಮವಿತ್ತು.
ಅರಣ್ಯ ಇಲಾಖೆಯು ಇತ್ತೀಚೆಗೆ ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡಿರುವ ಜಮೀನುಗಳನ್ನು ತೆರವುಗೊಳಿಸಿದ್ದರು. ಆ ಸಂದರ್ಭದಲ್ಲಿ ಬೆಳೆ ನಾಶ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಆ ಹಿನ್ನೆಲೆಯಲ್ಲಿ ರೈತರ ಜೊತೆಗೆ ಮಾತುಕತೆ ನಡೆಸಲು ಕುಮಾರಸ್ವಾಮಿಯವರು ಶ್ರೀನಿವಾಸಪುರಕ್ಕೆ ಹೋಗುವ ಕಾರ್ಯಕ್ರಮವಿತ್ತು. ಈಗ ಆ ಕಾರ್ಯಕ್ರಮ ರದ್ದಾಗಿದೆ.

lokesh

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

14 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

14 hours ago