ಬೆಂಗಳೂರು : ಕಿಂಗ್ ಮೇಕರ್ ಆಗುವ ಕನಸು ಕಂಡಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರ ಕನಸು ಭಗ್ನಗೊಂಡು, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಟಾಂಗ್ ಕೊಟ್ಟಿದ್ದಾರೆ.
ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಹೆಚ್ಡಿಕೆ ವಿರುದ್ಧ ಟ್ವೀಟ್ ಮೂಲಕ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
ಟ್ವೀಟ್ನಲ್ಲಿ ಏನಿದೆ ? : ಹೆಚ್ಡಿಕೆ ಯವರು ಚುನಾವಣೆಗೂ ಮುನ್ನ ಕಿಂಗ್ ಮೇಕರ್ ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ ಹೆಚ್ಡಿಕೆ ಕಿಂಗ್ ಮೇಕರ್ ಕನಸನ್ನು ನುಚ್ಚುನೂರು ಮಾಡಿದರು. ಕನಸು ಭಗ್ನಗೊಂಡ ಅವರು, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಹೆಚ್ಡಿಕೆ ಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಅವರು ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ?
ಕುಮಾರಸ್ವಾಮಿ ಅವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. ಅವರು ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…