BREAKING NEWS

ಹೆಚ್‌ಡಿಕೆ ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ : ದಿನೇಶ್‌ ಗುಂಡೂರಾವ್‌

ಬೆಂಗಳೂರು : ಕಿಂಗ್‌ ಮೇಕರ್‌ ಆಗುವ ಕನಸು ಕಂಡಿದ್ದ ಹೆಚ್‌.ಡಿ. ಕುಮಾರಸ್ವಾಮಿ ಅವರ ಕನಸು ಭಗ್ನಗೊಂಡು, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಟಾಂಗ್‌ ಕೊಟ್ಟಿದ್ದಾರೆ.
ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಹೆಚ್‌ಡಿಕೆ ವಿರುದ್ಧ ಟ್ವೀಟ್‌ ಮೂಲಕ ದಿನೇಶ್‌ ಗುಂಡೂರಾವ್‌ ತಿರುಗೇಟು ನೀಡಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ ? : ಹೆಚ್‌ಡಿಕೆ ಯವರು ಚುನಾವಣೆಗೂ ಮುನ್ನ ಕಿಂಗ್ ಮೇಕರ್ ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ ಹೆಚ್‌ಡಿಕೆ ಕಿಂಗ್ ಮೇಕರ್ ಕನಸನ್ನು ನುಚ್ಚುನೂರು ಮಾಡಿದರು. ಕನಸು ಭಗ್ನಗೊಂಡ ಅವರು, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಹೆಚ್‌ಡಿಕೆ ಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಅವರು ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ?

ಕುಮಾರಸ್ವಾಮಿ ಅವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. ಅವರು ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

8 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

9 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

10 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

15 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

15 hours ago