BREAKING NEWS

ಅವನೊಬ್ಬ ಮೋಸಗಾರ : ಚಾಮುಂಡೇಶ್ವರಿ ಕೈ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ ಸಿದ್ದು ಕಿಡಿ

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಬುಧವಾರ ನಡೆಯಿತು. ಅವನೊಬ್ಬ ಮೋಸಗಾರ. ಅವನು ಇಂಥವನು ಅಂತ ಗೊತ್ತಿದ್ದರೆ ನಮ್ಮ ಹುಡುಗನನ್ನೇ ನಿಲ್ಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಭ್ಯರ್ಥಿ ವರ್ತನೆ ಕುರಿತು ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರು ತಮ್ಮ ಬಳಿ ಆಕ್ಷೇಪ ವ್ಯಕ್ತಪಡಿಸಿದಾಗ ಸಿದ್ದರಾಮಯ್ಯ ಕೂಡ ಸಿದ್ದೇಗೌಡ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು. ಮಾವಿನಹಳ್ಳಿ ಸಿದ್ದೇಗೌಡ ಒಬ್ಬ ಮೋಸಗಾರ ಎಂದು ಕಿಡಿಕಾರಿದರು.

ಜೆಡಿಎಸ್‌ನವರಿಂದ ಬಿಜೆಪಿಗೆ ಬೆಂಬಲ : ವರುಣದಲ್ಲಿ ಜೆಡಿಎಸ್‌ನವರೆಲ್ಲ ಬಿಜೆಪಿಗೆ ಮತ ಹಾಕಿದ್ದಾರೆ. ಆದರೂ ನಾನು ಸುಲಭವಾಗಿ ಗೆಲುವು ದಾಖಲಿಸಲಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಅಷ್ಟೇ ಪೈಪೋಟಿ ಇದೆ. ಇಲ್ಲಿ ಬಿಜೆಪಿ ಎಲ್ಲೂ ನೇರವಾಗಿ ನಮ್ಮ ಜೊತೆ ಪೈಪೋಟಿಯಲ್ಲಿಲ್ಲ. ಸೋಮಣ್ಣ ಅವರಿಗೆ ವರುಣದ ಜನ ಯಾಕೆ ಮತ ಹಾಕಬೇಕು? ಕ್ಷೇತ್ರಕ್ಕೆ ಅವರ ಕೊಡುಗೆ ಏನು? ಅವರು ಜಾತಿ ಮುಂದಿಟ್ಟುಕೊಂಡು ಮತ ಕೇಳಿದ್ದಾರೆ. ಅದು ಬಿಟ್ಟರೆ ದುಡ್ಡಿನ ರಾಜಕೀಯ ಮಾಡಿದ್ದಾರೆ ಎಂದರು.

ನಮಗೆ ಬಹುಮತ ಬರೋದು ಖಚಿತವಾಗಿದೆ. ಬಹುತೇಕ ಎಲ್ಲಾ ಚುನಾವಣೋತ್ತರ ಸರ್ವೇಗಳೂ ಅದನ್ನೇ ಹೇಳುತ್ತಿದೆ. ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರೋದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ. ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ ಅಂತ ತಿಳಿಸಿದ್ದಾರೆ.

ಭಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ, ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದ್ರು. ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ?, ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ, ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದ್ರು ಎಂದು ಹೇಳಿದ್ದಾರೆ.

lokesh

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

4 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

6 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

7 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

7 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

8 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

8 hours ago