BREAKING NEWS

ಅವನೊಬ್ಬ ಮೋಸಗಾರ : ಚಾಮುಂಡೇಶ್ವರಿ ಕೈ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ ಸಿದ್ದು ಕಿಡಿ

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಬುಧವಾರ ನಡೆಯಿತು. ಅವನೊಬ್ಬ ಮೋಸಗಾರ. ಅವನು ಇಂಥವನು ಅಂತ ಗೊತ್ತಿದ್ದರೆ ನಮ್ಮ ಹುಡುಗನನ್ನೇ ನಿಲ್ಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಭ್ಯರ್ಥಿ ವರ್ತನೆ ಕುರಿತು ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರು ತಮ್ಮ ಬಳಿ ಆಕ್ಷೇಪ ವ್ಯಕ್ತಪಡಿಸಿದಾಗ ಸಿದ್ದರಾಮಯ್ಯ ಕೂಡ ಸಿದ್ದೇಗೌಡ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು. ಮಾವಿನಹಳ್ಳಿ ಸಿದ್ದೇಗೌಡ ಒಬ್ಬ ಮೋಸಗಾರ ಎಂದು ಕಿಡಿಕಾರಿದರು.

ಜೆಡಿಎಸ್‌ನವರಿಂದ ಬಿಜೆಪಿಗೆ ಬೆಂಬಲ : ವರುಣದಲ್ಲಿ ಜೆಡಿಎಸ್‌ನವರೆಲ್ಲ ಬಿಜೆಪಿಗೆ ಮತ ಹಾಕಿದ್ದಾರೆ. ಆದರೂ ನಾನು ಸುಲಭವಾಗಿ ಗೆಲುವು ದಾಖಲಿಸಲಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಅಷ್ಟೇ ಪೈಪೋಟಿ ಇದೆ. ಇಲ್ಲಿ ಬಿಜೆಪಿ ಎಲ್ಲೂ ನೇರವಾಗಿ ನಮ್ಮ ಜೊತೆ ಪೈಪೋಟಿಯಲ್ಲಿಲ್ಲ. ಸೋಮಣ್ಣ ಅವರಿಗೆ ವರುಣದ ಜನ ಯಾಕೆ ಮತ ಹಾಕಬೇಕು? ಕ್ಷೇತ್ರಕ್ಕೆ ಅವರ ಕೊಡುಗೆ ಏನು? ಅವರು ಜಾತಿ ಮುಂದಿಟ್ಟುಕೊಂಡು ಮತ ಕೇಳಿದ್ದಾರೆ. ಅದು ಬಿಟ್ಟರೆ ದುಡ್ಡಿನ ರಾಜಕೀಯ ಮಾಡಿದ್ದಾರೆ ಎಂದರು.

ನಮಗೆ ಬಹುಮತ ಬರೋದು ಖಚಿತವಾಗಿದೆ. ಬಹುತೇಕ ಎಲ್ಲಾ ಚುನಾವಣೋತ್ತರ ಸರ್ವೇಗಳೂ ಅದನ್ನೇ ಹೇಳುತ್ತಿದೆ. ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರೋದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ. ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ ಅಂತ ತಿಳಿಸಿದ್ದಾರೆ.

ಭಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ, ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದ್ರು. ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ?, ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ, ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದ್ರು ಎಂದು ಹೇಳಿದ್ದಾರೆ.

lokesh

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

50 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago