BREAKING NEWS

ಅವನೊಬ್ಬ ಮೋಸಗಾರ : ಚಾಮುಂಡೇಶ್ವರಿ ಕೈ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ ಸಿದ್ದು ಕಿಡಿ

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಬುಧವಾರ ನಡೆಯಿತು. ಅವನೊಬ್ಬ ಮೋಸಗಾರ. ಅವನು ಇಂಥವನು ಅಂತ ಗೊತ್ತಿದ್ದರೆ ನಮ್ಮ ಹುಡುಗನನ್ನೇ ನಿಲ್ಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಭ್ಯರ್ಥಿ ವರ್ತನೆ ಕುರಿತು ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರು ತಮ್ಮ ಬಳಿ ಆಕ್ಷೇಪ ವ್ಯಕ್ತಪಡಿಸಿದಾಗ ಸಿದ್ದರಾಮಯ್ಯ ಕೂಡ ಸಿದ್ದೇಗೌಡ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು. ಮಾವಿನಹಳ್ಳಿ ಸಿದ್ದೇಗೌಡ ಒಬ್ಬ ಮೋಸಗಾರ ಎಂದು ಕಿಡಿಕಾರಿದರು.

ಜೆಡಿಎಸ್‌ನವರಿಂದ ಬಿಜೆಪಿಗೆ ಬೆಂಬಲ : ವರುಣದಲ್ಲಿ ಜೆಡಿಎಸ್‌ನವರೆಲ್ಲ ಬಿಜೆಪಿಗೆ ಮತ ಹಾಕಿದ್ದಾರೆ. ಆದರೂ ನಾನು ಸುಲಭವಾಗಿ ಗೆಲುವು ದಾಖಲಿಸಲಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಅಷ್ಟೇ ಪೈಪೋಟಿ ಇದೆ. ಇಲ್ಲಿ ಬಿಜೆಪಿ ಎಲ್ಲೂ ನೇರವಾಗಿ ನಮ್ಮ ಜೊತೆ ಪೈಪೋಟಿಯಲ್ಲಿಲ್ಲ. ಸೋಮಣ್ಣ ಅವರಿಗೆ ವರುಣದ ಜನ ಯಾಕೆ ಮತ ಹಾಕಬೇಕು? ಕ್ಷೇತ್ರಕ್ಕೆ ಅವರ ಕೊಡುಗೆ ಏನು? ಅವರು ಜಾತಿ ಮುಂದಿಟ್ಟುಕೊಂಡು ಮತ ಕೇಳಿದ್ದಾರೆ. ಅದು ಬಿಟ್ಟರೆ ದುಡ್ಡಿನ ರಾಜಕೀಯ ಮಾಡಿದ್ದಾರೆ ಎಂದರು.

ನಮಗೆ ಬಹುಮತ ಬರೋದು ಖಚಿತವಾಗಿದೆ. ಬಹುತೇಕ ಎಲ್ಲಾ ಚುನಾವಣೋತ್ತರ ಸರ್ವೇಗಳೂ ಅದನ್ನೇ ಹೇಳುತ್ತಿದೆ. ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರೋದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ. ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ ಅಂತ ತಿಳಿಸಿದ್ದಾರೆ.

ಭಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ, ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದ್ರು. ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ?, ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ, ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದ್ರು ಎಂದು ಹೇಳಿದ್ದಾರೆ.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago