ಹಲಗೂರು : ಹಲಗೂರು ಸಮೀಪದ ಎಚ್.ಬಸಾಪುರ ಗ್ರಾಮದ ಬಳಿ ಎರಡು ಬೈಕ್ಗಳ ನಡುವೆ ನಡೆದ ಡಿಕ್ಕಿಯಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಸಂಭವಿಸಿದೆ.
ಹಲಗೂರು ಸಮೀಪದ ಕುಲುಮೆದೊಡ್ಡಿ ಗ್ರಾಮದ ಜನತಾ ಕಾಲೋನಿ ನಿವಾಸಿ ರಾಚಯ್ಯ ಅವರ ಪುತ್ರ ನಿಂಗರಾಜು(33) ಮೃತ ವ್ಯಕ್ತಿ.
ಸ್ವಗ್ರಾಮದಿಂದ ಕನಕಪುರ ತಾಲ್ಲೂಕಿನ ಹಲಸೂರು ಗ್ರಾಮಕ್ಕೆ ತನ್ನ ಮಗುವನ್ನು ತಾಯಿ ಬಳಿ ಬಿಡಲು ಬೈಕ್ನಲ್ಲಿ ತೆರಳುತ್ತಿದ್ದರು. ಆಗ ಕನಕಪುರ ಕಡೆಯಿಂದ ವೇಗವಾಗಿ ಬಂದ ಬೈಕ್ ನಿಂಗರಾಜು ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಗು ರಸ್ತೆ ಬದಿಗೆ ಬಿದ್ದಿದ್ದು, ಸಣ್ಣಪುಟ್ಡ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದೆ. ನಿಂಗರಾಜು ರಸ್ತೆಗೆ ಬಿದ್ದಿದ್ದು, ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಜೆಸಿಬಿ ನಿಂಗರಾಜು ದೇಹದ ಮೇಲೆ ಹರಿದ ಪರಿಣಾಮ ನಿಂಗರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಡಿಕ್ಕಿ ಹೊಡೆದ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…