BREAKING NEWS

ಝೀಕಾ ವೈರಸ್ ಗೈಡ್‍ಲೈನ್ಸ್ ಪಾಲಿಸುವಂತೆ ಆರೋಗ್ಯ ಇಲಾಖೆ ಕರೆ

ಬೆಂಗಳೂರು : ಝೀಕಾ ವೈರಸ್‍ನಿಂದ ಪಾರಾಗಲು ಜನ ಕೆಲ ಗೈಡ್‍ಲೈನ್ಸ್‍ಗಳನ್ನು ಫಾಲೋ ಮಾಡುವಂತೆ ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ. ವೈರಸ್ ಬಗ್ಗೆ ಸ್ವಲ್ಪ ಯಾಮಾರಿದರೂ ಪ್ರಾಣಕ್ಕೆ ಸಂಚಕಾರ ಎದುರಾಗುವ ಸಾಧ್ಯತೆ ಇರುವುದರಿಂದ ಜನ ರೋಗ ಲಕ್ಷಣ ಕಂಡು ಬಂದ ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಕಣ್ಣು ಕೆಂಪಾಗುವಿಕೆ, ತಲೆ ನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಯೇಳುವುದು ಹಾಗೂ ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸೋಂಕಿನ ಲಕ್ಷಣವಾಗಿದ್ದು, ಇಂತಹ ಲಕ್ಷಣಗಳು ಕಾಣಿಸಿಕೊಂಡವರು ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಲಾಗಿದೆ.

ಝೀಕಾ ವೈರಸ್ ತಡೆಗಟ್ಟಲು ನೀರು ಶೇಖರಣಾ ಪರಿಕರಗಳನ್ನು ಮುಚ್ಚಳದಿಂದ ಮುಚ್ಚಿಡಬೇಕು ಮತ್ತು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ, ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಮಕ್ಕಳು, ವಯೋವೃದ್ದರು ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಬೇಕು ಎಂದು ಸಲಹೆ ನೀಡಲಾಗಿದೆ.

ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ. ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತೆ.

ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಸಂಪರ್ಕ ಮಾಡಲು ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ.

andolanait

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago