BREAKING NEWS

ಝೀಕಾ ವೈರಸ್ ಗೈಡ್‍ಲೈನ್ಸ್ ಪಾಲಿಸುವಂತೆ ಆರೋಗ್ಯ ಇಲಾಖೆ ಕರೆ

ಬೆಂಗಳೂರು : ಝೀಕಾ ವೈರಸ್‍ನಿಂದ ಪಾರಾಗಲು ಜನ ಕೆಲ ಗೈಡ್‍ಲೈನ್ಸ್‍ಗಳನ್ನು ಫಾಲೋ ಮಾಡುವಂತೆ ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ. ವೈರಸ್ ಬಗ್ಗೆ ಸ್ವಲ್ಪ ಯಾಮಾರಿದರೂ ಪ್ರಾಣಕ್ಕೆ ಸಂಚಕಾರ ಎದುರಾಗುವ ಸಾಧ್ಯತೆ ಇರುವುದರಿಂದ ಜನ ರೋಗ ಲಕ್ಷಣ ಕಂಡು ಬಂದ ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಕಣ್ಣು ಕೆಂಪಾಗುವಿಕೆ, ತಲೆ ನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಯೇಳುವುದು ಹಾಗೂ ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸೋಂಕಿನ ಲಕ್ಷಣವಾಗಿದ್ದು, ಇಂತಹ ಲಕ್ಷಣಗಳು ಕಾಣಿಸಿಕೊಂಡವರು ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಲಾಗಿದೆ.

ಝೀಕಾ ವೈರಸ್ ತಡೆಗಟ್ಟಲು ನೀರು ಶೇಖರಣಾ ಪರಿಕರಗಳನ್ನು ಮುಚ್ಚಳದಿಂದ ಮುಚ್ಚಿಡಬೇಕು ಮತ್ತು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ, ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಮಕ್ಕಳು, ವಯೋವೃದ್ದರು ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಬೇಕು ಎಂದು ಸಲಹೆ ನೀಡಲಾಗಿದೆ.

ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ. ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತೆ.

ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಸಂಪರ್ಕ ಮಾಡಲು ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ.

andolanait

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

15 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

15 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

15 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

15 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

15 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

18 hours ago