ಕಳೆದ ಕೆಲ ದಿನಗಳ ಹಿಂದಷ್ಟೇ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಬೆಳಕಿಗೆ ಬಂದ ಬೆನ್ನಲ್ಲೇ ಅನುಮಾನಾಸ್ಪದ ಆಸ್ಪತ್ರೆಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಕಣ್ಣಿಟ್ಟಿದ್ದು, ಇದೀಗ ಬೆಂಗಳೂರಿನ ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಕ್ರಾಸ್ ಬಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಆಗುತ್ತಿದ್ದುದು ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿದೆ.
ಕಳೆದ ಒಂದು ವಾರ ಈ ಆಸ್ಪತೆಯ ದಾಖಲೆಗಳನ್ನು ಪರಿಶೀಲಿಸಿದ್ದ ಅಧಿಕಾರಿಗಳು ಇಂದು ಮತ್ತೆ ಮರುಪರಿಶೀಲನೆಗೆಂದು ಬಂದಾಗ ಮಹಿಳೆಯೊಬ್ಬರು ಗರ್ಭಪಾತ ಮಾಡಿಸಿಕೊಂಡಿರುವಂತೆ ಕಂಡು ಬಂದಿದ್ದು ಅನುಮಾನ ಉಂಟಾಗಿದೆ. ಕೂಡಲೇ ಎಚ್ಚೆತ್ತುಕೊಂಡು ಪರಿಶೀಲನೆ ನಡೆಸಿದಾಗ ಐದು ತಿಂಗಳ ಗರ್ಭಿಣಿಯ ಭ್ರೂಣ ಹತ್ಯೆ ಮಾಡಿದ್ದಾಗಿ ತಿಳಿದುಬಂದಿದೆ. ಸ್ಥಳದಲ್ಲಿಯೇ 16 ವಾರಗಳ ಹೆಣ್ಣು ಭ್ರೂಣ ಪತ್ತೆಯಾಗಿದೆ. ಈ ಘಟನೆ ಸಂಭವಿಸಿದ ಕೂಡಲೇ ಆಸ್ಪತ್ರೆಯ ಮಾಲೀಕ ವೈದ್ಯ ಶ್ರೀನಿವಾಸ್ ಪರಾರಿಯಾಗಿದ್ದಾರೆ.
Disclaimer: ಭ್ರೂಣ ಹತ್ಯೆ ಕಾನೂನುಬಾಹಿರವಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಭ್ರೂಣ ಹತ್ಯೆಗೆ ಸಹಕಾರ ನೀಡುವವರು ಹಾಗೂ ಭ್ರೂಣ ಹತ್ಯೆ ಮಾಡುವವರ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…