ಕಳೆದ ಕೆಲ ದಿನಗಳ ಹಿಂದಷ್ಟೇ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಬೆಳಕಿಗೆ ಬಂದ ಬೆನ್ನಲ್ಲೇ ಅನುಮಾನಾಸ್ಪದ ಆಸ್ಪತ್ರೆಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಕಣ್ಣಿಟ್ಟಿದ್ದು, ಇದೀಗ ಬೆಂಗಳೂರಿನ ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಕ್ರಾಸ್ ಬಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಆಗುತ್ತಿದ್ದುದು ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿದೆ.
ಕಳೆದ ಒಂದು ವಾರ ಈ ಆಸ್ಪತೆಯ ದಾಖಲೆಗಳನ್ನು ಪರಿಶೀಲಿಸಿದ್ದ ಅಧಿಕಾರಿಗಳು ಇಂದು ಮತ್ತೆ ಮರುಪರಿಶೀಲನೆಗೆಂದು ಬಂದಾಗ ಮಹಿಳೆಯೊಬ್ಬರು ಗರ್ಭಪಾತ ಮಾಡಿಸಿಕೊಂಡಿರುವಂತೆ ಕಂಡು ಬಂದಿದ್ದು ಅನುಮಾನ ಉಂಟಾಗಿದೆ. ಕೂಡಲೇ ಎಚ್ಚೆತ್ತುಕೊಂಡು ಪರಿಶೀಲನೆ ನಡೆಸಿದಾಗ ಐದು ತಿಂಗಳ ಗರ್ಭಿಣಿಯ ಭ್ರೂಣ ಹತ್ಯೆ ಮಾಡಿದ್ದಾಗಿ ತಿಳಿದುಬಂದಿದೆ. ಸ್ಥಳದಲ್ಲಿಯೇ 16 ವಾರಗಳ ಹೆಣ್ಣು ಭ್ರೂಣ ಪತ್ತೆಯಾಗಿದೆ. ಈ ಘಟನೆ ಸಂಭವಿಸಿದ ಕೂಡಲೇ ಆಸ್ಪತ್ರೆಯ ಮಾಲೀಕ ವೈದ್ಯ ಶ್ರೀನಿವಾಸ್ ಪರಾರಿಯಾಗಿದ್ದಾರೆ.
Disclaimer: ಭ್ರೂಣ ಹತ್ಯೆ ಕಾನೂನುಬಾಹಿರವಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಭ್ರೂಣ ಹತ್ಯೆಗೆ ಸಹಕಾರ ನೀಡುವವರು ಹಾಗೂ ಭ್ರೂಣ ಹತ್ಯೆ ಮಾಡುವವರ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…