ಕಳೆದ ಕೆಲ ದಿನಗಳ ಹಿಂದಷ್ಟೇ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಬೆಳಕಿಗೆ ಬಂದ ಬೆನ್ನಲ್ಲೇ ಅನುಮಾನಾಸ್ಪದ ಆಸ್ಪತ್ರೆಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಕಣ್ಣಿಟ್ಟಿದ್ದು, ಇದೀಗ ಬೆಂಗಳೂರಿನ ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಕ್ರಾಸ್ ಬಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಆಗುತ್ತಿದ್ದುದು ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿದೆ.
ಕಳೆದ ಒಂದು ವಾರ ಈ ಆಸ್ಪತೆಯ ದಾಖಲೆಗಳನ್ನು ಪರಿಶೀಲಿಸಿದ್ದ ಅಧಿಕಾರಿಗಳು ಇಂದು ಮತ್ತೆ ಮರುಪರಿಶೀಲನೆಗೆಂದು ಬಂದಾಗ ಮಹಿಳೆಯೊಬ್ಬರು ಗರ್ಭಪಾತ ಮಾಡಿಸಿಕೊಂಡಿರುವಂತೆ ಕಂಡು ಬಂದಿದ್ದು ಅನುಮಾನ ಉಂಟಾಗಿದೆ. ಕೂಡಲೇ ಎಚ್ಚೆತ್ತುಕೊಂಡು ಪರಿಶೀಲನೆ ನಡೆಸಿದಾಗ ಐದು ತಿಂಗಳ ಗರ್ಭಿಣಿಯ ಭ್ರೂಣ ಹತ್ಯೆ ಮಾಡಿದ್ದಾಗಿ ತಿಳಿದುಬಂದಿದೆ. ಸ್ಥಳದಲ್ಲಿಯೇ 16 ವಾರಗಳ ಹೆಣ್ಣು ಭ್ರೂಣ ಪತ್ತೆಯಾಗಿದೆ. ಈ ಘಟನೆ ಸಂಭವಿಸಿದ ಕೂಡಲೇ ಆಸ್ಪತ್ರೆಯ ಮಾಲೀಕ ವೈದ್ಯ ಶ್ರೀನಿವಾಸ್ ಪರಾರಿಯಾಗಿದ್ದಾರೆ.
Disclaimer: ಭ್ರೂಣ ಹತ್ಯೆ ಕಾನೂನುಬಾಹಿರವಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಭ್ರೂಣ ಹತ್ಯೆಗೆ ಸಹಕಾರ ನೀಡುವವರು ಹಾಗೂ ಭ್ರೂಣ ಹತ್ಯೆ ಮಾಡುವವರ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…