BREAKING NEWS

ಭ್ರೂಣ ಹತ್ಯೆ: ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಆಸ್ಪತ್ರೆ ಸಿಬ್ಬಂದಿ

ಕಳೆದ ಕೆಲ ದಿನಗಳ ಹಿಂದಷ್ಟೇ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಬೆಳಕಿಗೆ ಬಂದ ಬೆನ್ನಲ್ಲೇ ಅನುಮಾನಾಸ್ಪದ ಆಸ್ಪತ್ರೆಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಕಣ್ಣಿಟ್ಟಿದ್ದು, ಇದೀಗ ಬೆಂಗಳೂರಿನ ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಕ್ರಾಸ್‌ ಬಳಿಯ ಎಸ್‌ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಆಗುತ್ತಿದ್ದುದು ಅಧಿಕಾರಿಗಳಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿದೆ.

ಕಳೆದ ಒಂದು ವಾರ ಈ ಆಸ್ಪತೆಯ ದಾಖಲೆಗಳನ್ನು ಪರಿಶೀಲಿಸಿದ್ದ ಅಧಿಕಾರಿಗಳು ಇಂದು ಮತ್ತೆ ಮರುಪರಿಶೀಲನೆಗೆಂದು ಬಂದಾಗ ಮಹಿಳೆಯೊಬ್ಬರು ಗರ್ಭಪಾತ ಮಾಡಿಸಿಕೊಂಡಿರುವಂತೆ ಕಂಡು ಬಂದಿದ್ದು ಅನುಮಾನ ಉಂಟಾಗಿದೆ. ಕೂಡಲೇ ಎಚ್ಚೆತ್ತುಕೊಂಡು ಪರಿಶೀಲನೆ ನಡೆಸಿದಾಗ ಐದು ತಿಂಗಳ ಗರ್ಭಿಣಿಯ ಭ್ರೂಣ ಹತ್ಯೆ ಮಾಡಿದ್ದಾಗಿ ತಿಳಿದುಬಂದಿದೆ. ಸ್ಥಳದಲ್ಲಿಯೇ 16 ವಾರಗಳ ಹೆಣ್ಣು ಭ್ರೂಣ ಪತ್ತೆಯಾಗಿದೆ. ಈ ಘಟನೆ ಸಂಭವಿಸಿದ ಕೂಡಲೇ ಆಸ್ಪತ್ರೆಯ ಮಾಲೀಕ ವೈದ್ಯ ಶ್ರೀನಿವಾಸ್‌ ಪರಾರಿಯಾಗಿದ್ದಾರೆ.

Disclaimer: ಭ್ರೂಣ ಹತ್ಯೆ ಕಾನೂನುಬಾಹಿರವಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಭ್ರೂಣ ಹತ್ಯೆಗೆ ಸಹಕಾರ ನೀಡುವವರು ಹಾಗೂ ಭ್ರೂಣ ಹತ್ಯೆ ಮಾಡುವವರ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ. 

andolana

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

1 hour ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

2 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

2 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

2 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

2 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

3 hours ago