Mysore
20
overcast clouds
Light
Dark

ಕೆಎಸ್‌ಆರ್‌ಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತ : ವ್ಯಕ್ತಿ ಸಾವು

ಮೈಸೂರು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಬಸ್​ನಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ವೀರದೇವನಪುರ ಗ್ರಾಮದಲ್ಲಿ ನಡೆದಿದೆ.

ಚುಂಚನಹಳ್ಳಿ ಗ್ರಾಮದ ಸುರೇಶ್ (50) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ. ಇವರು ನಂಜನಗೂಡಿನಿಂದ ಚುಂಚನಹಳ್ಳಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹೃದಯಾಘಾತವಾಗಿ ಕುಳಿತ ಸೀಟ್​ನಲ್ಲೇ ಮೃತಪಟ್ಟಿದ್ದಾರೆ. ಆದರೆ ಯಾವಾಗ ಹೃದಯಾಘಾತವಾಗಿದೆ ಎಂದು ತಿಳಿದಿಲ್ಲ. ಅಲ್ಲದೇ ಇದನ್ನು ಬಸ್ಸಿನಲ್ಲಿದ್ದ ಪ್ರಯಾಣಿಕರೂ ಕೂಡ ಗಮನಿಸಿಲ್ಲ.

ನಿಲ್ದಾಣ ಬಂದಾಗ ಕಂಡಕ್ಟರ್ ಪ್ರಯಾಣಿಕನ ಬಳಿಗೆ ಬಂದು ಮಾತನಾಡಿಸಿದ್ದಾರೆ. ಆದರೆ ಪ್ರಯಾಣಿಕನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ವೇಳೆ ಮೃತಪಟ್ಟಿರುವುದು ಗೊತ್ತಾದರೂ ಏನೋ ಆಗಿರಬಹುದು ಎಂದು ಅದೇ ಬಸ್​ನಲ್ಲೇ ತಾಲೂಕಿನ ದೊಡ್ಡಕವಲಂದೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯ ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಪ್ರಯಾಣಿಕ ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದಾರೆ. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ