BREAKING NEWS

ಪರೀಕ್ಷೆ ಬರೆಯುವಾಗ ಹೃದಯಾಘಾತ : 9ನೇ ತರಗತಿ ವಿದ್ಯಾರ್ಥಿ ಸಾವು

ಬಾಗಲಕೋಟೆ : ಜಮಖಂಡಿ ತಾಲ್ಲೂಕಿನ ಹುಲ್ಯಾಳ ಗ್ರಾಮದ ಪ್ರೌಢ ಶಾಲೆಯಲ್ಲಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಯೊಬ್ಬನಿಗೆ ಹೃದಯಾಘಾತ ಸಂಭವಿಸಿ‌ ಸಾವಿಗೀಡಾಗಿರುವ ಘಟನೆ ನಡೆದಿದೆ. ಜಮಖಂಡಿ ತಾಲ್ಲೂಕಿನ ಇನಾಂ ಹಂಚಿನಾಳ ಪುನರ್ವಸತಿ ಕೇಂದ್ರದ ನಿವಾಸಿಯಾದ ವಿದ್ಯಾರ್ಥಿ ರಾಹುಲ್ ವಿಠ್ಠಲ ಕೋಲಕಾರ (15) ಸಾವನ್ನಪ್ಪಿರುವ ದುರ್ದೈವಿ.

ರಾಹುಲ್ ವಿಠ್ಠಲ ಹುಲ್ಯಾಳ ಗ್ರಾಮದ ಶ್ರೀ ಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ, ಶಾಲೆಯಲ್ಲಿ ಆತನಿಗೆ ಅರ್ಧ ವಾರ್ಷಿಕ ಪರೀಕ್ಷೆಯನ್ನು ಬರೆಯುವ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ಅಲ್ಲಿರುವ ಶಿಕ್ಷಕರು ವಿದ್ಯಾರ್ಥಿ ಪಾಲಕರಿಗೆ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿ ರಾಹುಲ್ ವಿಠ್ಠಲ ಕೋಲಕಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಮಖಂಡಿ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ. ಇನ್ನು ಸಾವಿಗೀಡಾಗಿರುವ ವಿದ್ಯಾರ್ಥಿಗೆ ಹೃದಯಸಂಬಂಧಿ ಕಾಯಿಲೆ ಇತ್ತು ಎಂದು ಹೇಳಲಾಗ್ತಿದೆ.

lokesh

Recent Posts

ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಗೃಹ ಸಚಿವ ಪರಮೇಶ್ವರ್‌ ಹೇಳಿದಿಷ್ಟು

ಬೆಂಗಳೂರು : ಮಡಿಕೇರಿಯಲ್ಲಿ ನಡೆದಿದೆ ಎನ್ನಲಾದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ…

25 mins ago

ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಅರಣ್ಯ ರಕ್ಷಕ ಸಾವು

ಎಚ್‌.ಡಿ.ಕೋಟೆ : ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಓರ್ವ ಅರಣ್ಯ ರಕ್ಷಕ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ನಾಗರಹೊಳೆಯ…

38 mins ago

ಓದುಗರ ಪತ್ರ | ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್‌ಆರ್‌ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ…

1 hour ago

ಓದುಗರ ಪತ್ರ | ಜೀವಾವಧಿ ಶಿಕ್ಷೆ ಎಂದರೆ …

ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ…

1 hour ago

ಓದುಗರ ಪತ್ರ | ಬೇಸಿಗೆಯಲ್ಲಿ ವಿದ್ಯುತ್ ದರ ಏರಿಕೆಯ ಬರೆ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ…

1 hour ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ | ಹೆಣ್ಣು ಭ್ರೂಣ ಹಂತಕ ವೈದ್ಯರನ್ನು ಬೇಟೆಯಾಡುವ ವರ್ಷಾ ದೇಶಪಾಂಡೆ

50ಕ್ಕೂ ಹೆಚ್ಚು ಸ್ಟಿಂಗ್‌ ಆಪರೇಷನ್‌ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…

2 hours ago