ಬಾಗಲಕೋಟೆ : ಜಮಖಂಡಿ ತಾಲ್ಲೂಕಿನ ಹುಲ್ಯಾಳ ಗ್ರಾಮದ ಪ್ರೌಢ ಶಾಲೆಯಲ್ಲಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಯೊಬ್ಬನಿಗೆ ಹೃದಯಾಘಾತ ಸಂಭವಿಸಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಜಮಖಂಡಿ ತಾಲ್ಲೂಕಿನ ಇನಾಂ ಹಂಚಿನಾಳ ಪುನರ್ವಸತಿ ಕೇಂದ್ರದ ನಿವಾಸಿಯಾದ ವಿದ್ಯಾರ್ಥಿ ರಾಹುಲ್ ವಿಠ್ಠಲ ಕೋಲಕಾರ (15) ಸಾವನ್ನಪ್ಪಿರುವ ದುರ್ದೈವಿ.
ರಾಹುಲ್ ವಿಠ್ಠಲ ಹುಲ್ಯಾಳ ಗ್ರಾಮದ ಶ್ರೀ ಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ, ಶಾಲೆಯಲ್ಲಿ ಆತನಿಗೆ ಅರ್ಧ ವಾರ್ಷಿಕ ಪರೀಕ್ಷೆಯನ್ನು ಬರೆಯುವ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ಅಲ್ಲಿರುವ ಶಿಕ್ಷಕರು ವಿದ್ಯಾರ್ಥಿ ಪಾಲಕರಿಗೆ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿ ರಾಹುಲ್ ವಿಠ್ಠಲ ಕೋಲಕಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಮಖಂಡಿ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ. ಇನ್ನು ಸಾವಿಗೀಡಾಗಿರುವ ವಿದ್ಯಾರ್ಥಿಗೆ ಹೃದಯಸಂಬಂಧಿ ಕಾಯಿಲೆ ಇತ್ತು ಎಂದು ಹೇಳಲಾಗ್ತಿದೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…