BREAKING NEWS

ಭಾರತದ ಪಾನಿಪುರಿಗೆ ಮನಸೋತ ಗೂಗಲ್‌: ಡೂಡಲ್‌ ಮೂಲಕ ಗೌರವ ಸಲ್ಲಿಕೆ

ನವದೆಹಲಿ: ಟೆಕ್​ ದೈತ್ಯ ಕಂಪನಿ ಗೂಗಲ್ ಭಾರತದ ಪಾನಿಪುರಿಗೆ ಮನಸೋತಿದ್ದು, ಡೂಡಲ್ ಮೂಲಕ ಪಾನಿಪುರಿಗೆ ವಿಶೇಷ ಗೌರವ ಸಲ್ಲಿಸಿದೆ.

ಆಲೂಗಡ್ಡೆ, ಕ್ಯಾರೆಟ್​ ಹಾಗೂ ಮಸಾಲೆ ನೀರಿನಿಂದ ತುಂಬಿದ ಗರಿಗಿರಿಯಾದ ಪುರಿ ದಕ್ಷಿಣ ಏಷ್ಯಾದ ಬೀದಿಬದಿಯ ಜನಪ್ರಿಯ ಖಾದ್ಯ. ಇಂದು ಜನಪ್ರಿಯ ಖಾದ್ಯವಾದ ಪಾನಿಪುರಿ ದಿನವಾಗಿದ್ದು. ಈ ಹಿನ್ನೆಲೆಯಲ್ಲಿ ಗೂಗಲ್ ಗೌರವ ಸಲ್ಲಿಸಿದೆ.

2015ರ ಜುಲೈ 12ರಂದು ಮಧ್ಯಪ್ರದೇಶದ ಇಂದೋರ್‌ನ ರೆಸ್ಟೋರೆಂಟ್‌ವೊಂದು ತನ್ನ ಗ್ರಾಹಕರಿಗಾಗಿ 51 ವಿವಿಧ ರೀತಿಯ ಪಾನಿಪುರಿಗಳನ್ನು ತಯಾರಿಸಿತು. ಅಲ್ಲಿ ತಯಾರಿಸಲಾಗಿದ್ದ ಅಷ್ಟೂ ಪಾನಿಪುರಿಗಳು ಅತ್ಯಂತ ರುಚಿಕರವಾಗಿದ್ದರಿಂದ ಗೋಲ್ಡನ್​ಬುಕ್​ ಆಫ್​ ವರ್ಲ್ಡ್​ ರೆಕಾರ್ಡ್​ನಲ್ಲಿ ಸ್ಥಾನ ನೀಡಲಾಗಿತ್ತು. ಅಂದಿನಿಂದ ಜುಲೈ 12 ಅನ್ನು ‘ಪಾನಿಪುರಿ ದಿನ’ ಎಂದು ಕರೆಯಲಾಗುತ್ತಿದೆ. ಇದೀಗ ಎಂಟು ವರ್ಷಗಳ ನಂತರ ಗೂಗಲ್ ಪಾನಿಪುರಿ ದಿನಾಚರಿಸುತ್ತಿದ್ದು, ಪಾನಿಪುರಿ ಗೇಮ್ ರಚಿಸಿದೆ.

ಗೂಗಲ್​ ಡೂಡಲ್​ ಪಾನಿಪುರಿ ಗೇಮ್​ ಆಡುವುದು ಹೇಗೆ…?

  • WWW.Google.Com ಸರ್ಚ್‌ ಮಾಡಿ.
  • ನಂತರ ಕಂಪ್ಯೂಟರ್‌ ಅಥವಾ ಮೊಬೈಲ್‌ ಮೇಲೆ ಗೇಮ್‌ ಗೋಚರವಾಗುತ್ತದೆ
  • ಬಳಿಕ ಗೇಮ್‌ ಮೇಲೆ ಕ್ಲಿಕ್‌ ಮಾಡಿ
  • ಆಗ Timed ಹಾಗೂ Relaxed ಎಂಬ ಆಪ್ಶನ್‌ ಸಿಗುತ್ತವೆ, ಯಾವುದಾದರೂ ಒಂದನ್ನು ಆಯ್ಕೆ ಮಾಡಿ
  • ಬಳಿಕ ಪಾನಿ ಪುರಿ ಜೋಡಿಸುತ್ತ ಗೇಮ್‌ ಆಡಿ
andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

10 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

12 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

12 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

12 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

12 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

12 hours ago