BREAKING NEWS

ಭಾರಿ ಮಳೆ| ದಕ್ಷಿಣ ಕನ್ನಡ, ಉಡುಪಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ: ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್

ದಕ್ಷಿಣಕನ್ನಡ: ಕರಾವಳಿ ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ.

ಹೌದು.. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು ಗುರುವಾರವೂ ಧಾರಾಕಾರ ಮಳೆಯಾಗುವ ಸೂಚನೆಯಿದೆ. ಇನ್ನು ನಿರಂತರ ಮಳೆ ಸುರಿಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ಮೇ 6(ಗುರುವಾರ) ರಂದು ರಜೆ ಘೋಷಿಸಲಾಗಿದ್ದರೆ, ಉಡುಪಿ ಜಿಲ್ಲೆಯಲ್ಲೂ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ.

ಹವಾಮಾನ ವರದಿಯ ಪ್ರಕಾರ ಕರಾವಳಿಯ ಗುರುವಾರಂದು 13 ಕಡೆಗಳಲ್ಲಿ ಅತಿ ಭಾರೀ ಮಳೆ, 11 ಕಡೆ ಭಾರೀ ಮಳೆ ಮತ್ತು ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ತಲಾ 3 ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಬುಧವಾರದಂದು ದಕ್ಷಿಣ ಗುಜರಾತ್ ನಿಂದ ಉತ್ತರ ಕೇರಳದ ಕರಾವಳಿಗೆ ಸೇರಿರುವ ಸಮುದ್ರ ಪ್ರದೇಶದಲ್ಲಿ ವಾಯುಭಾರ ಕುಸಿತದಿಂದಾಗಿ ಇನ್ನೂ 5 ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್
ಮೇ 6 ಗುರುವಾರದಂದು ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರವಾಡ, ಗದಗ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೇ 7ರಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  ಬುಧವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹೊನ್ನಾವರ ಮತ್ತು ಶಿರಾಲಿಯಲ್ಲಿ ತಲಾ 18 ಸೆಂ.ಮೀ. ಮಳೆಯಾಗಿದ್ದು, ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 17 ಸೆಂ.ಮೀ, ಬೆಳ್ತಂಗಡಿಯಲ್ಲಿ 16 ಸೆಂ.ಮೀ ಮಳೆಯಾಗಿದ್ದರೆ ಉಡುಪಿ ಜಿಲ್ಲೆಯ ಉಡುಪಿ ಮತ್ತು ಕಾರ್ಕಳದಲ್ಲಿ ತಲಾ 15 ಸೆಂ.ಮೀ. ಮಳೆ ಸುರಿದಿದೆ.

ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯ ಉಧೋಣಿಯಲ್ಲಿ 11 ಸೆಂ.ಮೀ, ಬೀದರ್ ಜಿಲ್ಲೆ ನಿರ್ಣಾದಲ್ಲಿ 10 ಸೆಂ.ಮೀ, ಕಲಬುರಗಿ ಜಿಲ್ಲೆಯ ಅಡಕೆಯಲ್ಲಿ 10 ಸೆಂ.ಮೀ. ಮಳೆಯಾಗಿದೆ. ಇನ್ನು ದಕ್ಷಿಣ ಒಳನಾಡಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ, ಕೊಡಗು ಜಿಲ್ಲೆ ಭಾಗಮಂಡಲದಲ್ಲಿ 8 ಸೆಂ.ಮೀ, ಚಿಕ್ಕಮಗಳೂರು ಜಿಲ್ಲೆ ಕಮ್ನಾಡಿಯಲ್ಲಿ 7 ಸೆಂ.ಮೀ. ಮಳೆಯಾಗಿದೆ. ಅದು ಬಿಟ್ಟರೆ ಹೆಚ್ಚಿನ ಕಡೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

andolanait

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

11 hours ago