BREAKING NEWS

ಉತ್ತರ ಕನ್ನಡದಲ್ಲಿ ಭಾರೀ ಮಳೆ, ಗುಡ್ಡಕುಸಿತ- ಹಿಮಾಚಲ, ಉತ್ತರಾಖಂಡದಲ್ಲಿ ದಿಢೀರ್ ಪ್ರವಾಹ ಅವಾಂತರ

ಬೆಂಗಳೂರು : ರಾಜ್ಯದಲ್ಲಿ ಇದೀಗ ಮುಂಗಾರು ಚುರುಕು ಪಡೆಯುತ್ತಿದೆ. ಆದರೆ ನಿರೀಕ್ಷೆಯಷ್ಟು ಪ್ರಮಾಣದಲ್ಲಿ ಮಳೆ ಎಲ್ಲಾ ಕಡೆ ವ್ಯಾಪಿಸಿಲ್ಲ. ಇಂದು ಉತ್ತರಕನ್ನಡ ದಲ್ಲಿ ಭಾರೀ ಮಳೆಯಾಗಿದೆ.

ಕಾರವಾರದ ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದೆ. ಬಿಣಗಾ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ಮೇಲೆ ಬೃಹತ್ ಬಂಡೆ ಉರುಳಿದೆ. ಪರಿಣಾಮ ಏಕ ಮುಖ ಸಂಚಾರ ಬಂದ್ ಮಾಡಲಾಗಿದೆ. ಅವಘಡಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ ಎನ್ನಲಾಗ್ತಿದೆ. ಹೊನ್ನಾವರದ ಕಡ್ನೀರ್ ಬಳಿ ರಸ್ತೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ.

ಉಡುಪಿ, ದಕ್ಷಿಣ ಕನ್ನಡದಲ್ಲೂ ಮಳೆಯಾಗುತ್ತಿದೆ. ಬೆಳಗಾವಿಯಲ್ಲೂ ಒಂದಿಷ್ಟು ಮಳೆಯಾಗಿದೆ. ಆದರೆ ಇದು ಕೃಷಿಗೆ ಸಾಕಾಗ್ತಿಲ್ಲ. ಹೀಗಾಗಿ ಜನ ಕಪ್ಪೆ ಮದುವೆ, ಕತ್ತೆ ಮದುವೆಗಳಿಗೆ ಮೊರೆ ಹೋಗ್ತಿದ್ದಾರೆ. ವಿಜಯಪುರದ ಕಲಕೇರಿಯ ಜನ ಮಳೆಗಾಗಿ ಸಮಾಧಿಗಳಿಗೆ ನೀರುಣಿಸುವ ಶಾಸ್ತ್ರ ಮಾಡಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಮಳೆ ಚಿತ್ರಣ ಆಶಾದಾಯಕವಾಗಿಲ್ಲ. ಕಳೆದ 26ದಿನದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಒಟ್ಟಾರೆ 61%ರಷ್ಟು ಮಳೆ ಕೊರತೆಯಾಗಿದೆ.

ಇತ್ತ ಮುಂಗಾರು ಮಾರುತಗಳು ದೇಶಾದ್ಯಂತ ವ್ಯಾಪಿಸಿವೆ. ಪರಿಣಾಮ ಹಲವು ರಾಜ್ಯಗಳಲ್ಲಿ ಕುಂಭದ್ರೋಣ ಮಳೆ ಆಗ್ತಿದೆ. ಪ್ರವಾಹ, ಮೇಘಸ್ಫೋಟ, ಭೂಕುಸಿತಗಳು ಉಂಟಾಗಿ ನಾನಾ ಅವಾಂತರಗಳು ಉಂಟಾಗ್ತಿವೆ. ಹಿಮಾಚಲಪ್ರದೇಶದ ಬಾಗಿಪುಲ್‍ನಲ್ಲಿ ದಿಢೀರ್ ಪ್ರವಾಹ ಉಂಟಾಗಿ 200 ಮಂದಿ ಅಪಾಯಕ್ಕೆ ಸಿಲುಕಿದ್ದಾರೆ. ಕುಲ್ಲು-ಮಂಡಿ ಹೈವೇಯಲ್ಲಿ ಗುಡ್ಡ ಕುಸಿತ ಉಂಟಾದ ಪರಿಣಾಮ ಸುಮಾರು 15 ಕಿಲೋಮೀಟರ್‍ನಷ್ಟು ಉದ್ದಕ್ಕೆ ವಾಹನಗಳು ಸಾಲುಗಟ್ಟಿವೆ. ಹಿಂದೆ ಹೋಗಲು ಆಗ್ತಿಲ್ಲ ಮುಂದೆ ಹೋಗಲು ದಾರಿ ಇಲ್ಲ. ಅಲ್ಲೆಲ್ಲೂ ಊಟ ವಸತಿಗಾಗಿ ಕನಿಷ್ಠ ಹೋಟೆಲ್ ಕೂಡ ಇಲ್ಲ. ಪ್ರವಾಸಿಗರಂತೂ ದಿಕ್ಕು ತೋಚದೇ ಕುಳಿತುಬಿಟ್ಟಿದ್ದಾರೆ.

ಕಾಮಾಂಡ್ ಪ್ರಾಂತ್ಯದಲ್ಲಿ ಹತ್ತಾರು ವಾಹನಗಳು ಸಿಲುಕಿವೆ. ಕೆಲವು ವಾಹನಗಳು ನೀರಲ್ಲಿ ಕೊಚ್ಚಿ ಹೋಗಿವೆ. ಮುಂದಿನ ಐದು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಾಖಂಡ್, ಹಿಮಾಚಲದಲ್ಲಿ ಮಳೆಗೆ ಐದಾರು ಮಂದಿ ಬಲಿ ಆಗಿದ್ದಾರೆ. ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಅತ್ತ ಅಸ್ಸಾಂನಲ್ಲಿ ರಣಭೀಕರ ಪ್ರವಾಹಕ್ಕೆ ತತ್ತರಿಸಿದೆ. 15 ಜಿಲ್ಲೆಗಳ 2.72 ಲಕ್ಷ ಮಂದಿ ಪ್ರವಾಹ ಸಂತ್ರಸ್ತರಾಗಿದ್ದಾರೆ. ಮಹಾರಾಷ್ಟ್ರ ಕರಾವಳಿಯಲ್ಲಿ ಭಾರೀ ಮಳೆ ಆಗ್ತಿದೆ. ಒಡಿಶಾ, ರಾಜಸ್ಥಾನ, ಮಧ್ಯಪ್ರದೇಶ, ಗೋವಾ, ಛತ್ತೀಸ್‍ಘಡ, ಹಿಮಾಚಲ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಐಎಂಡಿ ತಿಳಿಸಿದೆ.

lokesh

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

13 hours ago