BREAKING NEWS

ಉತ್ತರ ಕನ್ನಡದಲ್ಲಿ ಭಾರೀ ಮಳೆ, ಗುಡ್ಡಕುಸಿತ- ಹಿಮಾಚಲ, ಉತ್ತರಾಖಂಡದಲ್ಲಿ ದಿಢೀರ್ ಪ್ರವಾಹ ಅವಾಂತರ

ಬೆಂಗಳೂರು : ರಾಜ್ಯದಲ್ಲಿ ಇದೀಗ ಮುಂಗಾರು ಚುರುಕು ಪಡೆಯುತ್ತಿದೆ. ಆದರೆ ನಿರೀಕ್ಷೆಯಷ್ಟು ಪ್ರಮಾಣದಲ್ಲಿ ಮಳೆ ಎಲ್ಲಾ ಕಡೆ ವ್ಯಾಪಿಸಿಲ್ಲ. ಇಂದು ಉತ್ತರಕನ್ನಡ ದಲ್ಲಿ ಭಾರೀ ಮಳೆಯಾಗಿದೆ.

ಕಾರವಾರದ ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದೆ. ಬಿಣಗಾ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ಮೇಲೆ ಬೃಹತ್ ಬಂಡೆ ಉರುಳಿದೆ. ಪರಿಣಾಮ ಏಕ ಮುಖ ಸಂಚಾರ ಬಂದ್ ಮಾಡಲಾಗಿದೆ. ಅವಘಡಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ ಎನ್ನಲಾಗ್ತಿದೆ. ಹೊನ್ನಾವರದ ಕಡ್ನೀರ್ ಬಳಿ ರಸ್ತೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ.

ಉಡುಪಿ, ದಕ್ಷಿಣ ಕನ್ನಡದಲ್ಲೂ ಮಳೆಯಾಗುತ್ತಿದೆ. ಬೆಳಗಾವಿಯಲ್ಲೂ ಒಂದಿಷ್ಟು ಮಳೆಯಾಗಿದೆ. ಆದರೆ ಇದು ಕೃಷಿಗೆ ಸಾಕಾಗ್ತಿಲ್ಲ. ಹೀಗಾಗಿ ಜನ ಕಪ್ಪೆ ಮದುವೆ, ಕತ್ತೆ ಮದುವೆಗಳಿಗೆ ಮೊರೆ ಹೋಗ್ತಿದ್ದಾರೆ. ವಿಜಯಪುರದ ಕಲಕೇರಿಯ ಜನ ಮಳೆಗಾಗಿ ಸಮಾಧಿಗಳಿಗೆ ನೀರುಣಿಸುವ ಶಾಸ್ತ್ರ ಮಾಡಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಮಳೆ ಚಿತ್ರಣ ಆಶಾದಾಯಕವಾಗಿಲ್ಲ. ಕಳೆದ 26ದಿನದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಒಟ್ಟಾರೆ 61%ರಷ್ಟು ಮಳೆ ಕೊರತೆಯಾಗಿದೆ.

ಇತ್ತ ಮುಂಗಾರು ಮಾರುತಗಳು ದೇಶಾದ್ಯಂತ ವ್ಯಾಪಿಸಿವೆ. ಪರಿಣಾಮ ಹಲವು ರಾಜ್ಯಗಳಲ್ಲಿ ಕುಂಭದ್ರೋಣ ಮಳೆ ಆಗ್ತಿದೆ. ಪ್ರವಾಹ, ಮೇಘಸ್ಫೋಟ, ಭೂಕುಸಿತಗಳು ಉಂಟಾಗಿ ನಾನಾ ಅವಾಂತರಗಳು ಉಂಟಾಗ್ತಿವೆ. ಹಿಮಾಚಲಪ್ರದೇಶದ ಬಾಗಿಪುಲ್‍ನಲ್ಲಿ ದಿಢೀರ್ ಪ್ರವಾಹ ಉಂಟಾಗಿ 200 ಮಂದಿ ಅಪಾಯಕ್ಕೆ ಸಿಲುಕಿದ್ದಾರೆ. ಕುಲ್ಲು-ಮಂಡಿ ಹೈವೇಯಲ್ಲಿ ಗುಡ್ಡ ಕುಸಿತ ಉಂಟಾದ ಪರಿಣಾಮ ಸುಮಾರು 15 ಕಿಲೋಮೀಟರ್‍ನಷ್ಟು ಉದ್ದಕ್ಕೆ ವಾಹನಗಳು ಸಾಲುಗಟ್ಟಿವೆ. ಹಿಂದೆ ಹೋಗಲು ಆಗ್ತಿಲ್ಲ ಮುಂದೆ ಹೋಗಲು ದಾರಿ ಇಲ್ಲ. ಅಲ್ಲೆಲ್ಲೂ ಊಟ ವಸತಿಗಾಗಿ ಕನಿಷ್ಠ ಹೋಟೆಲ್ ಕೂಡ ಇಲ್ಲ. ಪ್ರವಾಸಿಗರಂತೂ ದಿಕ್ಕು ತೋಚದೇ ಕುಳಿತುಬಿಟ್ಟಿದ್ದಾರೆ.

ಕಾಮಾಂಡ್ ಪ್ರಾಂತ್ಯದಲ್ಲಿ ಹತ್ತಾರು ವಾಹನಗಳು ಸಿಲುಕಿವೆ. ಕೆಲವು ವಾಹನಗಳು ನೀರಲ್ಲಿ ಕೊಚ್ಚಿ ಹೋಗಿವೆ. ಮುಂದಿನ ಐದು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಾಖಂಡ್, ಹಿಮಾಚಲದಲ್ಲಿ ಮಳೆಗೆ ಐದಾರು ಮಂದಿ ಬಲಿ ಆಗಿದ್ದಾರೆ. ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಅತ್ತ ಅಸ್ಸಾಂನಲ್ಲಿ ರಣಭೀಕರ ಪ್ರವಾಹಕ್ಕೆ ತತ್ತರಿಸಿದೆ. 15 ಜಿಲ್ಲೆಗಳ 2.72 ಲಕ್ಷ ಮಂದಿ ಪ್ರವಾಹ ಸಂತ್ರಸ್ತರಾಗಿದ್ದಾರೆ. ಮಹಾರಾಷ್ಟ್ರ ಕರಾವಳಿಯಲ್ಲಿ ಭಾರೀ ಮಳೆ ಆಗ್ತಿದೆ. ಒಡಿಶಾ, ರಾಜಸ್ಥಾನ, ಮಧ್ಯಪ್ರದೇಶ, ಗೋವಾ, ಛತ್ತೀಸ್‍ಘಡ, ಹಿಮಾಚಲ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಐಎಂಡಿ ತಿಳಿಸಿದೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago