ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ ಮತ್ತು ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆಯನ್ನು ಭಾನುವಾರವೂ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿಕೂಲ ಹವಾಮಾನದ ದೃಷ್ಟಿಯಿಂದ ಇಂದು ಬೆಳಿಗ್ಗೆ ಜಮ್ಮುವಿನ ಭಗವತಿ ನಗರ ಯಾತ್ರಿ ನಿವಾಸದಿಂದ ಯಾವುದೇ ಹೊಸ ಬ್ಯಾಚ್ ಯಾತ್ರಿಗಳಿಗೆ ಅವಕಾಶ ನೀಡಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಭಾರೀ ಮಳೆ ಮತ್ತು ಭೂ ಕುಸಿತದಿಂದಾಗಿ ಜಮ್ಮು ಮತ್ತು ಗುಹಾ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಸಾವಿರಾರು ಯಾತ್ರಾರ್ಥಿಗಳು ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ.
ಎರಡೂ ಮಾರ್ಗಗಳಲ್ಲಿ ಯಾತ್ರಿಗಳಿಗೆ ಹೆಲಿಕಾಪ್ಟರ್ ಸೇವೆಗಳು ಲಭ್ಯವಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುರುವಾರ ರಾತ್ರಿಯಿಂದ ಜಮ್ಮು ಮತ್ತು ಕಾಶ್ಮೀರದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ “ಯಾರೂ ಆತಂಕಕ್ಕೆ ಒಳಗಾಗಬೇಡಿ. ಹಿರಿಯ ಅಧಿಕಾರಿಗಳು ಪರಿಸ್ಥಿತಿ ಪರಿಶೀಲಿಸುತ್ತಿದ್ದಾರೆ’ ಎಂದಿದ್ದಾರೆ.
ಈ ವರ್ಷದ 62 ದಿನಗಳ ಸುದೀರ್ಘ ಅಮರನಾಥ ಯಾತ್ರೆಯು ಜುಲೈ 1 ರಂದು ಪ್ರಾರಂಭವಾಯಿತು ಮತ್ತು ಶ್ರಾವಣ ಪೂರ್ಣಿಮಾ ಹಬ್ಬದ ಜೊತೆಗೆ ಆಗಸ್ಟ್ 31 ರಂದು ಕೊನೆಗೊಳ್ಳಲಿದೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…