BREAKING NEWS

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ

ನವದೆಹಲಿ : ಅಡುಗೆ ಅನಿಲ ದರ ಇಳಿಕೆಯಾಗಿ ಗ್ರಾಹಕರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಂತೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ 158 ರೂ.ಗಳನ್ನು ಕಡಿತಗೊಳಿಸಿದೆ.

ಹೊಸ ಬೆಲೆಗಳು ಶುಕ್ರವಾರದಿಂದಲೇ ಜಾರಿಗೆ ಬಂದಿದ್ದು, ದೆಹಲಿಯ 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಚಿಲ್ಲರೆ ಮಾರಾಟದ ಬೆಲೆ ರೂ 1,522 ಆಗಿರುತ್ತದೆ. ಈ ಹಿಂದೆ, ರಕ್ಷಾ ಬಂಧನದ ಮುನ್ನಾದಿನದಂದು, ದೇಶದ ಮಹಿಳೆಯರಿಗೆ ಉಡುಗೊರೆಯಾಗಿ ಕೇಂದ್ರ ಸರ್ಕಾರವು ದೇಶೀಯ ಎಲ್‍ಪಿಜಿ ಬೆಲೆಯನ್ನು ರೂ 200 ಕಡಿತಗೊಳಿಸಿತ್ತು.

ವಾಣಿಜ್ಯ ಮತ್ತು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಗಳ ಮಾಸಿಕ ಪರಿಷ್ಕರಣೆಗಳು ಪ್ರತಿ ತಿಂಗಳ ಮೊದಲ ದಿನದಂದು ಸಂಭವಿಸುತ್ತವೆ, ಹೊಸ ದರಗಳು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುತ್ತವೆ. ಆಗಸ್ಟ್ ನಲ್ಲಿ, ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಒಎಂಸಿಗಳು ರೂ 99.75 ರಷ್ಟು ಕಡಿತಗೊಳಿಸಿದ್ದವು. ಜುಲೈನಲ್ಲಿ ವಾಣಿಜ್ಯ ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ತಲಾ ರೂ 7 ಹೆಚ್ಚಿಸಲಾಗಿತ್ತು.

ಈ ಏರಿಕೆಗೆ ಮೊದಲು, ಈ ವರ್ಷದ ಮೇ ಮತ್ತು ಜೂನ್‍ನಲ್ಲಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಗಳಿಗೆ ಸತತ ಎರಡು ಬಾರಿ ಕಡಿತ ಮಾಡಲಾಗಿತ್ತು. ಮೇ ತಿಂಗಳಲ್ಲಿ ಗೃಹ, ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ರೂ 172 ಕಡಿಮೆ ಮಾಡಿದ್ದರೆ, ಜೂನ್‍ನಲ್ಲಿ ರೂ 83 ಕಡಿಮೆಯಾಗಿದೆ.

ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಈ ವರ್ಷ ಮಾರ್ಚ್ 1 ರಂದು ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಪ್ರತಿ ಯೂನಿಟ್‍ಗೆ 350.50 ಮತ್ತು ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಪ್ರತಿ ಯೂನಿಟ್‍ಗೆ ರೂ. 50 ಹೆಚ್ಚಿಸಿದ್ದವು.

lokesh

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

22 mins ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

1 hour ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

7 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

7 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

7 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

7 hours ago