BREAKING NEWS

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ

ನವದೆಹಲಿ : ಅಡುಗೆ ಅನಿಲ ದರ ಇಳಿಕೆಯಾಗಿ ಗ್ರಾಹಕರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಂತೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ 158 ರೂ.ಗಳನ್ನು ಕಡಿತಗೊಳಿಸಿದೆ.

ಹೊಸ ಬೆಲೆಗಳು ಶುಕ್ರವಾರದಿಂದಲೇ ಜಾರಿಗೆ ಬಂದಿದ್ದು, ದೆಹಲಿಯ 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಚಿಲ್ಲರೆ ಮಾರಾಟದ ಬೆಲೆ ರೂ 1,522 ಆಗಿರುತ್ತದೆ. ಈ ಹಿಂದೆ, ರಕ್ಷಾ ಬಂಧನದ ಮುನ್ನಾದಿನದಂದು, ದೇಶದ ಮಹಿಳೆಯರಿಗೆ ಉಡುಗೊರೆಯಾಗಿ ಕೇಂದ್ರ ಸರ್ಕಾರವು ದೇಶೀಯ ಎಲ್‍ಪಿಜಿ ಬೆಲೆಯನ್ನು ರೂ 200 ಕಡಿತಗೊಳಿಸಿತ್ತು.

ವಾಣಿಜ್ಯ ಮತ್ತು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಗಳ ಮಾಸಿಕ ಪರಿಷ್ಕರಣೆಗಳು ಪ್ರತಿ ತಿಂಗಳ ಮೊದಲ ದಿನದಂದು ಸಂಭವಿಸುತ್ತವೆ, ಹೊಸ ದರಗಳು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುತ್ತವೆ. ಆಗಸ್ಟ್ ನಲ್ಲಿ, ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಒಎಂಸಿಗಳು ರೂ 99.75 ರಷ್ಟು ಕಡಿತಗೊಳಿಸಿದ್ದವು. ಜುಲೈನಲ್ಲಿ ವಾಣಿಜ್ಯ ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ತಲಾ ರೂ 7 ಹೆಚ್ಚಿಸಲಾಗಿತ್ತು.

ಈ ಏರಿಕೆಗೆ ಮೊದಲು, ಈ ವರ್ಷದ ಮೇ ಮತ್ತು ಜೂನ್‍ನಲ್ಲಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಗಳಿಗೆ ಸತತ ಎರಡು ಬಾರಿ ಕಡಿತ ಮಾಡಲಾಗಿತ್ತು. ಮೇ ತಿಂಗಳಲ್ಲಿ ಗೃಹ, ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ರೂ 172 ಕಡಿಮೆ ಮಾಡಿದ್ದರೆ, ಜೂನ್‍ನಲ್ಲಿ ರೂ 83 ಕಡಿಮೆಯಾಗಿದೆ.

ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಈ ವರ್ಷ ಮಾರ್ಚ್ 1 ರಂದು ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಪ್ರತಿ ಯೂನಿಟ್‍ಗೆ 350.50 ಮತ್ತು ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಪ್ರತಿ ಯೂನಿಟ್‍ಗೆ ರೂ. 50 ಹೆಚ್ಚಿಸಿದ್ದವು.

lokesh

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

14 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

23 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

23 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

23 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

23 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

23 hours ago