Mysore
23
broken clouds
Light
Dark

ಇನ್ಮುಂದೆ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧ: ರಾಜ್ಯ ಸರಕಾರ ಆದೇಶ

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಡಿ ಬರುವ ಎಲ್ಲ ದೇವಾಲಯಗಳಲ್ಲಿ ಮೊಬೈಲ್‍ಗಳ ನಿಷೇಧಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿರುವ ಕಾರಣ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಬಳಕೆ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗಳಿಗೂ ಹಾಗೂ ದೇವ ದರ್ಶನಕ್ಕೆ ಬರುವ ಭಕ್ತರಿಗೂ ತೊಂದರೆಯಾಗುತ್ತಿರುವ ಹಿನ್ನೆಲೆ ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಭಕ್ತರು ದೇವಾಲಯಗಳ ಸೂಚನಾ ಫಲಕಗಳಲ್ಲಿ ಉಲ್ಲೇಖಿಸಿರುವ ಸೂಚನೆಗಳನ್ನು ಪಾಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಮನವಿ ಮಾಡಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ