BREAKING NEWS

ನಾಯಕನ ಆರಾಧನೆ ದೇಶಕ್ಕೆ ಅಪಾಯಕಾರಿ: ಖರ್ಗೆ

ನವದೆಹಲಿ (ಪಿಟಿಐ): ‘ದೇಶದಲ್ಲಿ ಬಲವಂತವಾಗಿ ಜನರನ್ನು ಬಾಯಿ ಮುಚ್ಚಿಸುವ ಸಂಸ್ಕೃತಿ ಹಾಗೂ ರಾಷ್ಟ್ರ ವಿರೋಧಿ ಪಟ್ಟ ಕಟ್ಟುವ ಮನಃಸ್ಥಿತಿ ಮೇಲುಗೈ ಸಾಧಿಸುತ್ತಿರುವುದು ಭವಿಷ್ಯದಲ್ಲಿ ಭಾರತೀಯ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ನಾಶಕ್ಕೆ ಕಾರಣವಾಗಲಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಜಯಂತಿ ಹಿನ್ನೆಲೆಯಲ್ಲಿ ಸಂದೇಶ ನೀಡಿರುವ ಅವರು, ‘ಸಂಸತ್‌ ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ನಡುವಿನ ಚರ್ಚೆಗೆ ವೇದಿಕೆಯಾಗಬೇಕು. ಆದರೆ, ಅದನ್ನು ಆಡಳಿತ ಪಕ್ಷವು ಹೋರಾಟದ ಅಖಾಡವಾಗಿ ಪರಿವರ್ತಿಸಿದೆ’ ಎಂದು ವಿಷಾದಿಸಿದ್ದಾರೆ.

ಪ್ರಜಾಸತ್ತಾತ್ಮಕ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ನ್ಯಾಯದ ಅನುಷ್ಠಾನದಲ್ಲಿ ಅಂಬೇಡ್ಕರ್‌ ‘ಚಾಂಪಿಯನ್’ ಆಗಿದ್ದಾರೆ. ದೇಶವನ್ನು ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿಪಡಿಸುವಲ್ಲಿ ಅವರಿಗಿದ್ದ ಬದ್ಧತೆ ನಮಗೆ ಅನುಕರಣೀಯ. ಜಾತಿ ಪದ್ಧತಿ, ಲಿಂಗ ಅಸಮಾನತೆಯ ನಿರ್ಮೂಲನೆಯಲ್ಲಿ ಅವರ ಶ್ರಮ ಎಲ್ಲರಿಗೂ ಮಾದರಿ ಎಂದು ಸ್ಮರಿಸಿದ್ದಾರೆ.

‘ರಾಜಕಾರಣದಲ್ಲಿ ಭಕ್ತಿ ಅಥವಾ ನಾಯಕನ ಆರಾಧನೆಯು ಅಪಾಯಕಾರಿ ಎಂದು ಅಂಬೇಡ್ಕರ್‌ ಈ ಮೊದಲೇ ಎಚ್ಚರಿಸಿದ್ದಾರೆ. ಪ್ರಸಕ್ತ ದೇಶದ ರಾಜಕೀಯದಲ್ಲಿ ಈ ಮನಃಸ್ಥಿತಿಯೇ ತುಂಬಿದೆ. ಧಾರ್ಮಿಕ ತಳಹದಿಯಲ್ಲಿ ಭಕ್ತಿಯು ಆತ್ಮದ ಮುಕ್ತಿಗೆ ದಾರಿಯಾಗಬೇಕು. ಆದರೆ, ‘ಭಕ್ತಿ’ ಪ್ರೇರಿತ ರಾಜಕೀಯ ಸಲ್ಲದು. ಒಂದು ವೇಳೆ ಇದು ರಾಜಕಾರಣಕ್ಕೆ ಪ್ರವೇಶಿಸಿದರೆ ಆ ಕ್ಷೇತ್ರ ಅವನತಿ ಹೊಂದಿ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡುತ್ತದೆ’ ಎಂದು ಅಂಬೇಡ್ಕರ್‌ ಹೇಳಿಕೆಯನ್ನು ಉಲ್ಲೇಖಿಸಿರುವ ಖರ್ಗೆ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಪ್ರಸ್ತಾಪಿಸದೆ ಟೀಕಿಸಿದ್ದಾರೆ.

ಪ್ರಸ್ತುತ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಬೇಕೇ ಅಥವಾ ಸರ್ವಾಧಿಕಾರಿ ಧೋರಣೆಯನ್ನು ಬೆಂಬಲಿಸಬೇಕೇ ಎಂಬ ಬಗ್ಗೆ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳುವ ಸಂದರ್ಭ ಬಂದಿದೆ ಎಂದಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಅಂಬೇಡ್ಕರ್‌ ಅವರಿಗೆ ಗೌರವ ಸೂಚಿಸಿದ್ದು, ‘ಅಂಬೇಡ್ಕರ್‌ ಅವರ ಪ್ರಜಾಸತ್ತಾತ್ಮಕ ಆಶಯಗಳೇ ನಮಗೆ ದಾರಿದೀಪವಾಗಿವೆ, ಅವು ನಮ್ಮ ಶಕ್ತಿಯೂ ಆಗಿವೆ’ ಎಂದಿದ್ದಾರೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

15 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago