BREAKING NEWS

ನಾಯಕನ ಆರಾಧನೆ ದೇಶಕ್ಕೆ ಅಪಾಯಕಾರಿ: ಖರ್ಗೆ

ನವದೆಹಲಿ (ಪಿಟಿಐ): ‘ದೇಶದಲ್ಲಿ ಬಲವಂತವಾಗಿ ಜನರನ್ನು ಬಾಯಿ ಮುಚ್ಚಿಸುವ ಸಂಸ್ಕೃತಿ ಹಾಗೂ ರಾಷ್ಟ್ರ ವಿರೋಧಿ ಪಟ್ಟ ಕಟ್ಟುವ ಮನಃಸ್ಥಿತಿ ಮೇಲುಗೈ ಸಾಧಿಸುತ್ತಿರುವುದು ಭವಿಷ್ಯದಲ್ಲಿ ಭಾರತೀಯ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ನಾಶಕ್ಕೆ ಕಾರಣವಾಗಲಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಜಯಂತಿ ಹಿನ್ನೆಲೆಯಲ್ಲಿ ಸಂದೇಶ ನೀಡಿರುವ ಅವರು, ‘ಸಂಸತ್‌ ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ನಡುವಿನ ಚರ್ಚೆಗೆ ವೇದಿಕೆಯಾಗಬೇಕು. ಆದರೆ, ಅದನ್ನು ಆಡಳಿತ ಪಕ್ಷವು ಹೋರಾಟದ ಅಖಾಡವಾಗಿ ಪರಿವರ್ತಿಸಿದೆ’ ಎಂದು ವಿಷಾದಿಸಿದ್ದಾರೆ.

ಪ್ರಜಾಸತ್ತಾತ್ಮಕ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ನ್ಯಾಯದ ಅನುಷ್ಠಾನದಲ್ಲಿ ಅಂಬೇಡ್ಕರ್‌ ‘ಚಾಂಪಿಯನ್’ ಆಗಿದ್ದಾರೆ. ದೇಶವನ್ನು ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿಪಡಿಸುವಲ್ಲಿ ಅವರಿಗಿದ್ದ ಬದ್ಧತೆ ನಮಗೆ ಅನುಕರಣೀಯ. ಜಾತಿ ಪದ್ಧತಿ, ಲಿಂಗ ಅಸಮಾನತೆಯ ನಿರ್ಮೂಲನೆಯಲ್ಲಿ ಅವರ ಶ್ರಮ ಎಲ್ಲರಿಗೂ ಮಾದರಿ ಎಂದು ಸ್ಮರಿಸಿದ್ದಾರೆ.

‘ರಾಜಕಾರಣದಲ್ಲಿ ಭಕ್ತಿ ಅಥವಾ ನಾಯಕನ ಆರಾಧನೆಯು ಅಪಾಯಕಾರಿ ಎಂದು ಅಂಬೇಡ್ಕರ್‌ ಈ ಮೊದಲೇ ಎಚ್ಚರಿಸಿದ್ದಾರೆ. ಪ್ರಸಕ್ತ ದೇಶದ ರಾಜಕೀಯದಲ್ಲಿ ಈ ಮನಃಸ್ಥಿತಿಯೇ ತುಂಬಿದೆ. ಧಾರ್ಮಿಕ ತಳಹದಿಯಲ್ಲಿ ಭಕ್ತಿಯು ಆತ್ಮದ ಮುಕ್ತಿಗೆ ದಾರಿಯಾಗಬೇಕು. ಆದರೆ, ‘ಭಕ್ತಿ’ ಪ್ರೇರಿತ ರಾಜಕೀಯ ಸಲ್ಲದು. ಒಂದು ವೇಳೆ ಇದು ರಾಜಕಾರಣಕ್ಕೆ ಪ್ರವೇಶಿಸಿದರೆ ಆ ಕ್ಷೇತ್ರ ಅವನತಿ ಹೊಂದಿ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡುತ್ತದೆ’ ಎಂದು ಅಂಬೇಡ್ಕರ್‌ ಹೇಳಿಕೆಯನ್ನು ಉಲ್ಲೇಖಿಸಿರುವ ಖರ್ಗೆ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಪ್ರಸ್ತಾಪಿಸದೆ ಟೀಕಿಸಿದ್ದಾರೆ.

ಪ್ರಸ್ತುತ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಬೇಕೇ ಅಥವಾ ಸರ್ವಾಧಿಕಾರಿ ಧೋರಣೆಯನ್ನು ಬೆಂಬಲಿಸಬೇಕೇ ಎಂಬ ಬಗ್ಗೆ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳುವ ಸಂದರ್ಭ ಬಂದಿದೆ ಎಂದಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಅಂಬೇಡ್ಕರ್‌ ಅವರಿಗೆ ಗೌರವ ಸೂಚಿಸಿದ್ದು, ‘ಅಂಬೇಡ್ಕರ್‌ ಅವರ ಪ್ರಜಾಸತ್ತಾತ್ಮಕ ಆಶಯಗಳೇ ನಮಗೆ ದಾರಿದೀಪವಾಗಿವೆ, ಅವು ನಮ್ಮ ಶಕ್ತಿಯೂ ಆಗಿವೆ’ ಎಂದಿದ್ದಾರೆ.

andolanait

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

3 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

5 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

6 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

11 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

13 hours ago